ಇಂದಿನ ‘ಬೇಕು’ಗಳ ಹಿಂದೆ ಓಡುವ, ಒತ್ತಡದ, ವ್ಯಾಯಾಮವಿಲ್ಲದ ಜೀವನ ವಿಧಾನದಿಂದ ಹಲವು ರೋಗಗಳು ಮನುಷ್ಯರನ್ನು ಮುತ್ತುತ್ತಿವೆ. ದಿನನಿತ್ಯದ ರಾಸಾಯನಿಕಗಳ ಬಳಕೆ, ಕಲಬೆರಕೆಯ ವಿಷಯುಕ್ತ ಆಹಾರ ಪದಾರ್ಥಗಳಿಂದ ಮುಕ್ತವಾಗಿ ಬದುಕು ಸಾಗಿಸುವ ಹಲವು ಮಾರ್ಗಗಳನ್ನು ಈ ಕೃತಿಯಲ್ಲಿ ಚರ್ಚಿಸಲಾಗಿದೆ. ಈ ದಿಸೆಯಲ್ಲಿ ಯಾವುದನ್ನು ತಿನ್ನಬೇಕು, ಯಾವುದನ್ನು ತಿನ್ನಬಾರದು, ಎಷ್ಟು ತಿಂದರೆ ಆರೋಗ್ಯಕ್ಕೆ ಉತ್ತಮ ಎನ್ನುವ ಸಾಮಾನ್ಯ ಜ್ಞಾನವನ್ನು ಲೇಖಕ ಡಾ. ನಾ. ಸೋಮೇಶ್ವರ ತಿಳಿಸಿದ್ದು, ಡಾ. ಸಿ.ಆರ್, ಚಂದ್ರಶೇಖರ ಈ ಲೇಖನಗಳನ್ನು ಸಂಪಾದಿಸಿದ್ದಾರೆ..
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE