ಖ್ಯಾತಿ ಇತಿಹಾಸ ತಜ್ಞ ಡಾ. ಎಚ್.ಎಸ್. ಗೋಪಾಲರಾವ್ ಅವರು ಕೃತಿ-ನಮ್ಮ ನಾಡು ಕರ್ನಾಟಕ. ಕನ್ನಡ ನಾಡು-ನುಡಿ ಸೇರಿದಂತೆ ರಾಜ್ಯದ ಸಾಂಸ್ಕೃತಿಕ ಪರಿಸರವನ್ನು ಅರ್ಥೈಸಿಕೊಳ್ಳಲು ಉತ್ತಮ ಹಾಗೂ ಅಧಿಕೃತ ಮಾಹಿತಿ ಸಿಗುವುದು ವಿರಳ. ಈ ಕೊರತೆಯನ್ನು ನೀಗಿಸಿರುವ ಕೃತಿ ಇದು. ಕರ್ನಾಟಕದ ಪರಂಪರೆಯ ವಿಸ್ತಾರ, ಅದರ ಎಲ್ಲ ಆಯಾಮಗಳನ್ನು ಪರಿಚಯಿಸುವುದು ಈ ಕೃತಿಯ ಉದ್ದೇಶ. ಈ ಪುಸ್ತಕ ಕರ್ನಾಟಕದ ಶ್ರೀಮಂತ ಪರಂಪರೆಯನ್ನು ವಿವರಿಸುತ್ತದೆ.
ಡಾ. ಎಚ್.ಎಸ್. ಗೋಪಾಲರಾವ್ ಅವರು 1946ರ ನವೆಂಬರ್ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು. ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ. ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ. ಜೇನು ನಂಜು, ...
READ MORE