ನಮ್ಮ ದೇಹದಲ್ಲಿ ವಿಸರ್ಜನಾ ವ್ಯವಸ್ಥೆಯು ಹೇಗೆ ಕಾರ್ಯ ನಿರ್ವಸಲಿದೆ ಎಂಬೂದನ್ನು ಈ ಕೃತಿಯೂ ವಿವರಿಸುತ್ತದೆ. ದೇಹದ ವಿಸರ್ಜನಾ ವ್ಯವಸ್ಥೆಯಲ್ಲಿ ಯಾವ ಯಾವ ಅಂಗಗಳು , ಯಾವ ಯಾವ ಅಂಗದ ಮುಖಾಂತರ ಏನೇನು ವಸ್ತುಗಳನ್ನು ವಿಸರ್ಜಿಸಲಾಗುತ್ತದೆ, ಮತ್ತು ದೇಹದಲ್ಲಿ ವಿಸರ್ಜನೆ ವ್ಯವಸ್ಥೆ ನಿಧಾನವಾದರೆ ಅಥವಾ ಅಸಮರ್ಪಕವಾದರೆ ದೇಹದ ಮೇಲೆ ಯಾವ ರೀತಿಯ ದುಷ್ಪರಿಣಾಮಗಳು ಬೀರುತ್ತವೆ , ಈ ಸಂಗತಿಗಳ ಕುರಿತು .ನಾ.ಸೋಮೇಶ್ವರರು ವಿವರಣೆಗಳನ್ನು ಈ ಕೃತಿಯಲ್ಲಿ ನೀಡಿದ್ದಾರೆ . ವಿಸರ್ಜನಾಂಗಗಳಿಗೆ ಬರುವ ಎಲ್ಲಾ ಸಾಮಾನ್ಯ ಕಾಯಿಲೆಗಳು ಮತ್ತು ಅವುಗಳ ಚಿಕಿತ್ಸೆ ಏನು ಎಂಬುದನ್ನು ವಿವರವಾಗಿ , ಜನಸಾಮನ್ಯಾರಿಗೂ ಅರ್ಥವಾಗುವ ಶೈಲಿಯಲ್ಲಿ ವಿವರಿಸಿದ್ದಾರೆ.
ನಾ. ಸೋಮೇಶ್ವರ ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...
READ MORE