‘ನಂಬಿಯಣ್ಣ: ಒಂದು ಅಧ್ಯಯನ’ ಎಂಬುದು ಸಾಹಿತಿ-ಲೇಖಕ ಡಾ. ಎಸ್. ವಿದ್ಯಾಂಶಕರ ಅವರು ರಚಿಸಿದ ಸಂಶೋಧನೆ ಅಧ್ಯಯನ ಯೋಗ್ಯ ಕೃತಿ. ಈತನು ತಮಿಳಿನ ಪೆರಿಯಪುರಾಣದಲ್ಲಿ ನಿರೂಪಿತವಾದ ಒಟ್ಟು 63 ಶಿವಭಕ್ತರಲ್ಲಿ ಒಬ್ಬ. ಸೌಂದರನಂಬಿ, ಸುಂದರಮೂರ್ತಿ, ತಿರುನಾವಲೂರರ್ ಮುಂತಾದ ಪರ್ಯಾಯ ನಾಮವಳಿಗಳಿಂದ ಈತ ಪ್ರಖ್ಯಾತನಾಗಿದ್ದಾನೆ. ತಮಿಳುನಾಡಿನ ದಕ್ಷಿಣ ಆರ್ಕಾಟ್ ಜಿಲ್ಲೆಯ ತಿರುನಾವಲೂರಿನವನು. ಕ್ರಿ.ಶ. 840ರಿಂದ 865 ರಲ್ಲಿ ಜೀವಿಸಿದ್ದನೆಂದು ಹೇಳಲಾಗುತ್ತಿದೆ. ಶಿವದೇವಾಲಯಗಳಿಗೆ ಭೇಟಿ ನೀಡಿ ಶಿವಸ್ತೋತ್ರಗಳನ್ನು ಹಾಡುವುದು ಈತನ ಕಾಯಕ.
ಎಸ್. ವಿದ್ಯಾಶಂಕರ ಅವರು ಚಾಮರಾಜ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿಯಲ್ಲಿ ಜನಿಸಿದರು. ತಂದೆ ವಿದ್ವಾನ್' ಸ.ಸ. ಶಿವಶಂಕರಪ್ಪ ತಾಯಿ ವಿಶಾಲಾಕ್ಷಮ್ಮ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು ೧೯೬೬ರಲ್ಲಿ ಧಾರವಾಡದ ಕರ್ನಾಟಕ ವಿ.ವಿ.ಯಲ್ಲಿ ಎಂ.ಎ. ಪದವಿ ಗಳಿಸಿ ೧೯೭೧ರಲ್ಲಿ ಬೆಂಗಳೂರು ವಿ.ವಿ. ಪಿಎಚ್.ಡಿ. ಪದವಿ ಗಳಿಸಿದರು. ಬೆಂಗಳೂರು ವಿ.ವಿ. ಕನ್ನಡ ವಿಭಾಗದ ಸ್ನಾತಕೋತ್ತರ ಸಂಶೋಧನ ಸಹಾಯಕರಾಗಿ ಸೇವೆ ಸಲ್ಲಿಸಿ ೧೯೭೦ ರಿಂದ ೮೫ರರಿಗೆ ಕನ್ನಡ ಅಧ್ಯಯನ ಕೇಂದ್ರದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ ನಂತರ ನಿರ್ದೇಶಕರಾಗಿ ಸೇವೆ ಸಲ್ಲಿಸಿ ೨೦೦೧ರಲ್ಲಿ ವೃತ್ತಿಯಿಂದ ವಿಶ್ರಾಂತಿ ಪಡೆದರು. ೧೯೯೫೪-೯೭ರಲ್ಲಿ ಹಂಪಿಯ ಕನ್ನಡ ...
READ MORE