ಲೇಖಕ ಭಿ.ಪ. ಕಾಳೆ ಅವರು ಬರೆದ ಸಾಮಾಜಿಕ ಹಾಗೂ ಕೌಟುಂಬಿಕ ಕಾದಂಬರಿ ರೂಪದ ಆತ್ಮಕಥೆ-ನನ್ನ ಗೃಹಿಣಿ. ಸಂಸಾರವು ಕ್ಲೇಶಮಯವೂ ; ದುಃಖದಾಯಕವೂ ಆಗಿದೆ ಎಂದು ಹೇಳುವವರೇ ಸಂಸಾರವನ್ನು ಉಳಿದೆಲ್ಲರಿಗಿಂತ ಹೆಚ್ಚಾಗಿ ತಬ್ಬಿಕೊಂಡಿರುತ್ತಾರೆ. ಸಂಸಾರದ ಬಗ್ಗೆಯೇ ಅತೀ ಹೆಚ್ಚು ಚಿಂತಿತರಾಗಿರುತ್ತಾರೆ. ಹೆಣ್ಣುಮಕ್ಕಳು ಗಂಡುಮಕ್ಕಳಿಗಿಂತ ಹೆಚ್ಚಾಗಿ ಸಂಸಾರ ತೂಗಿಸಿಕೊಂಡು ಹೋಗುತ್ತಿರುತ್ತಾರೆ ಎಂಬುದನ್ನು ಒಂದು ಅರ್ಥದಲ್ಲಿ ತಮ್ಮ ಆತ್ಮಚರಿತ್ರೆಯ ಶೈಲಿಯಲ್ಲಿ ಬರೆದ ಕಾದಂಬರಿ ಇದು.
ಭಿಕಾಜಿಪಂತ ಕಾಳೆ ಎಂಬುದು ಪೂರ್ಣ ಹೆಸರು. ಭಿ.ಪ.ಕಾಳೆ ಎಂದೇ ಖ್ಯಾತಿ. ಹೆಸರಾಂತ ಕಾದಂಬರಿಕಾರರು. ಪ್ರಕಾಶಕ-ಮುದ್ರಕರೂ ಹೌದು. ತಂದೆ ಪರಶುರಾಮ ಪಂತ ಕಾಳೆ. ಧಾರವಾಡ ಜಿಲ್ಲೆಯ ಕುಂದುಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿ 1889ರ ಜನವರಿ 20ರಂದು ಹುಟ್ಟಿದರು. ಕುರಂದವಾಡ ಸಂಸ್ಥಾನಿಕರ ಅಧೀನದಲ್ಲಿದ್ದ ಈ ಪ್ರದೇಶ ಪಟವರ್ಧನ ಸಂಸ್ಥಾನಿಕರ ಆಡಳಿತಕ್ಕೆ ಒಳಪಟ್ಟಿತ್ತು. ಸಂಸ್ಥಾನಿಕರ ಮನೆ ಮಾತು ಮರಾಠಿ. ಆಡಳಿತದ ಭಾಷೆಯೂ ಮರಾಠಿ. ಸಂಶಿ ಗ್ರಾಮವು ಮರಾಠಿಮಯವೇ ಆಗಿತ್ತು. ಮಹಾರಾಷ್ಟ್ರದಿಂದ ಪಟವರ್ಧನ ಸಂಸ್ಥಾನಕ್ಕೆ ಬಂದು ಅಲ್ಲಿಯ ಬೇರೆ ಬೇರೆ ಊರುಗಳಲ್ಲಿ ನೆಲಸಿದ ಚಿತ್ಪಾವನ (ಕೊಂಕಣಸ್ಥ) ಬ್ರಾಹ್ಮಣ ಮನೆತನಗಳಲ್ಲಿ ಕಾಳೆ ಕುಟುಂಬವೂ ಒಂದು. ಈ ಕುಂಟುಂಬ ಸಾಂಸಿಯಲ್ಲಿ ...
READ MORE