ಕನ್ನಡ ನಾಡು ಕಂಡ ಶ್ರೇಷ್ಠ ಇಂಜಿನಿಯರರ ಮೊದಲ ಸಾಲಲ್ಲಿ ನಿಲ್ಲುವವರು ಸರ್. ಎಂ. ವಿಶ್ವೇಶ್ವರಯ್ಯನವರು. ತಮ್ಮ ಜೀವಿತ ಅವಧಿಯಲ್ಲೇ ಒಂದು ದಂತಕತೆಯಾಗಿದ್ದ ಅವರ ಜೀವನ, ಸಾಧನೆಗಳು, ಈ ಬಗ್ಗೆ ಕನ್ನಡಿಗರೆಲ್ಲರಿಗೂ ಕುತೂಹಲಭರಿತ ಅಭಿಮಾನವಿದೆ.
Memoirs of My Working Life ಅನ್ನುವ ಪುಸ್ತಕದ ಮೂಲಕ ಅವರು ತಮ್ಮ ವೃತ್ತಿ ಜೀವನದ ನೆನಪುಗಳನ್ನು, ಏಳು-ಬೀಳು, ಕಾರ್ಯ ಚಿಂತನೆಗಳನ್ನು ದಾಖಲಿಸಿದ್ದಾರೆ. ಅದನ್ನು ಅತ್ಯಂತ ಸಮರ್ಥವಾಗಿ ಕನ್ನಡಕ್ಕೆ ಅನುವಾದಿಸಿದ್ದಾರೆ ಡಾ.ಗಜಾನನ ಶರ್ಮ . ಅಂಕಿತ ಪ್ರಕಾಶನ ಹೊರ ತಂದಿರುವ ಈ ಪುಸ್ತಕ ಪ್ರತಿಯೊಬ್ಬ ಕನ್ನಡಿಗ ಓದಬೇಕಾದ ಹೊತ್ತಗೆಗಳಲ್ಲಿ ಒಂದು.
ಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ. 'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ...
READ MORE