ವೈದ್ಯ ಸಾಹಿತಿ ಡಾ. ಎಚ್. ಗಿರಿಜಮ್ಮ ಅವರ ಕೃತಿ-ನಿಮ್ಮ ಮಗು. ತಾಯ್ತನವೆಂಬುದು ಪ್ರಕೃತಿ ಹೆಣ್ಣಿಗೆ ನೀಡಿರುವ ಕೊಡುಗೆ. ತಾಯಿಯ ಗರ್ಭದಿಂದ ಹೊರ ಜಗತ್ತಿಗೆ ಬಂದ ಕೂಡಲೇ ಗಾಬರಿಯಿಂದ ಅಳುವ ಮಗು, ಸೃಷ್ಟಿಯ ಅದ್ಭುತಗಳಲ್ಲೊಂದು. ಗರ್ಭ ಧರಿಸುವುದರಿಂದಲೇ ತಾಯ್ತನದ ಹೊಣೆಗಾರಿಕೆ ಪ್ರಾರಂಭವಾಗುತ್ತದೆ. ನಿಮ್ಮ ಮಗುವನ್ನು ಪೋಷಿಸುವಲ್ಲಿ, ಮಗುವಿಗೆ ಕಾಯಿಲೆ ಬಂದ ಸಂದರ್ಭದಲ್ಲಿ ನೀವು ಅನುಸರಿಸಬೇಕಾದ ಕ್ರಮಗಳ ಕುರಿತು, ಆಹಾರ ಮತ್ತು ಪಾಲನೆ - ಪೋಷಣೆ ಕುರಿತು ಈ ಕೃತಿಯಲ್ಲಿ ಅತ್ಯುತ್ತಮ ಸಲಹೆಗಳಿವೆ.
ಡಾ. ಎಚ್. ಗಿರಿಜಮ್ಮ- ಹುಟ್ಟಿದ್ದು ದಾವಣಗೆರೆ. ಪಿಯುಸಿವರೆಗೆ ಓದಿದ್ದು ಅಲ್ಲಿಯೇ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ. ಯಶಸ್ವಿ ವೈದ್ಯಳಾಗಬೇಕು ಎನ್ನುವ ಅವರ ತಾಯಿಯ ಆಸೆ ಅವರನ್ನು ವೈದ್ಯಕೀಯ ಅಧ್ಯಯನದಲ್ಲಿ ತೊಡಗಿಕೊಳ್ಳುವಂತೆ ಮಾಡಿತು. ಚಿಕ್ಕ ವಯಸ್ಸಿನಲ್ಲಿ ಕಾದಂಬರಿಗಾರ್ತಿ ತ್ರಿವೇಣಿ ಬರಹದಿಂದ ಪ್ರಭಾವಿತರಾದವರು ಗಿರಿಜಮ್ಮ. ಅವರ ಮೊದಲ ಕತೆ ಹೂಬಳ್ಳಿಗೆ ಈ ಆಸರೆ ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾಯಿತು. ಚಂದಮಾಮ, ತಮಸೋಮ ಜ್ಯೋತಿರ್ಗಮಯ, ಅಂಬರತಾರೆ, ಸೇರಿದಂತೆ ಒಟ್ಟು 27 ಕಾದಂಬರಿಗಳು ಪ್ರಕಟವಾಗಿವೆ. ಅರ್ಧಾಂಗಿ, ಸಂಜೆಮಲ್ಲಿಗೆ, ಅನಾವರಣ, ಅನೇಕ ನೀಳ್ಗತೆಗಳು ಮಯೂರದಲ್ಲಿ ಪ್ರಕಟವಾಗಿವೆ. ಒಟ್ಟು 50 ಕತೆಗಳನ್ನು ಬರೆದಿದ್ದಾರೆ. ಐದು ಕಥಾಸಂಗ್ರಹಗಳು ...
READ MORE