ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ-ನಿತ್ಯ ಜೀವನದ ಜಂಜಾಟಗಳು ಏಗುವುದು ಹೇಗೆ?. ಬದುಕು ಹೂವಿನ ಹಾಸಿಗೆಯಲ್ಲ. ಅದು ಸದಾ ಜಂಜಾಟ-ಸಂಕಷ್ಟಗಳಿಂದ ಕೂಡಿರುತ್ತದೆ. ಅದನ್ನು ಸರಳವಾಗಿ, ಸುಗಮವಾಗಿ ಸಂತೋಷಭರಿತವಾಗಿ ಮಾಡಿಕೊಳ್ಳುವುದು ಒಂದು ಕಲೆ. ಈ ಕಲೆ ತಿಳಿದಿಲ್ಲದ ಜನರು ಬರೀ ಕಷ್ಟಗಳನ್ನೇ ಅನುಭವಿಸುತ್ತಾ, ಬದುಕನ್ನು ಹಳಿಯುತ್ತಲೇ ಇರುತ್ತಾರೆ. ಕಷ್ಟಗಳನ್ನು ಬರುವುದು ತಡೆಯಲಾಗದು. ಅವು ಬಂದರೆ ಹೇಗೆ ಎದುರಿಸಬೇಕು ಎಂಬುದನ್ನು ಲೇಖಕರು ಮನೋವೈಜ್ಞಾನಿಕವಾಗಿ ಚರ್ಚಿಸಿದ್ದು, ಸಲಹೆಗಳನ್ನು ನೀಡಿದ್ದು ಈ ಕೃತಿಯ ವೈಶಿಷ್ಟ್ಯ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE