ಸೂಫಿ ತತ್ವಜ್ಞಾನಿ ಮುಲ್ಲಾ ನಸ್ರುದ್ದೀನನ ಅವರು ರಚಿಸಿದ ಸಾವಿರಾರು ಕಥೆಗಳ ಪೈಕಿ ನೂರನ್ನುಮಾತ್ರ ಲೇಖಕ ಜೋಗಿ ಅವರು ಅನುವಾದಿಸಿರುವ ಕೃತಿ-ಒಂದಾನೊಂದು ಊರಲ್ಲಿ. ಮುಲ್ಲಾ ನಸ್ರುದ್ದೀನ್ ಅವರು ಮಕ್ಕಳಿಗಾಗಿ ರಚಿಸಿದ ಕಥೆಗಳನ್ನು ಮಾತ್ರ ಆಯ್ದುಕೊಂಡಿದ್ದು, ಅವು ಕನ್ನಡಕ್ಕೆ ಸಮರ್ಥವಾಗಿ ಅನುವಾದಗೊಂಡಿವೆ.
ಜೋಗಿ, ಜಾನಕಿ, ಎಚ್. ಗಿರೀಶ್ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್ ರಾವ್ ಹತ್ವಾರ್ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್ 16ರಂದು. ಮೂಲತಃ ಸೂರತ್ಕಲ್ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಯ್ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...
READ MOREಒಂದಾನೊಂದು ಊರಲ್ಲಿ - ಪುಸ್ತಕ ಪರಿಚಯ