ಲೇಖಕ ಟಿ.ಎನ್. ವಾಸುದೇವ ಮೂರ್ತಿ ಅವರ ಕೃತಿ-ಓಶೋ, ಕಾವ್ಯ ಧರ್ಮ ಮತ್ತು ಧರ್ಮ. ಓಶೋ ಅವರು ಧರ್ಮ, ಅಧ್ಯಾತ್ಮ, ಪಾರಾಮಾರ್ಥ ಹೀಗೆ ಅಲೌಕಿಕವಾದ ಪರಿಕಲ್ಪನೆಗಳ ಕುರಿತು ಹತ್ತು ಹಲವು ಉಪನ್ಯಾಸಗಳನ್ನು, ಬರೆಹಗಳನ್ನು ರಚಿಸಿದ್ದು ಲೇಖಕರು ಓಶೋ ಅವರ ಕಾವ್ಯ ಧರ್ಮ ಹಾಗೂ ಧರ್ಮದ ಪರಿಕಲ್ಪನೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್ ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ...
READ MORE