ಪಾಕಿಸ್ತಾನದ ಐ. ಎಸ್. ಐ

Author : ಎಸ್. ಗಂಗಾಧರಯ್ಯ

Pages 260

₹ 265.00




Year of Publication: 2024
Published by: ಸಪ್ನ ಬುಕ್ ಹೌಸ್
Address: ಆರ್ ಒ#11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು - 560 009
Phone: 080-40114455

Synopsys

‘ಪಾಕಿಸ್ತಾನದ ಐ .ಎಸ್ .ಐ’ ಗುರುಪ್ರಸಾದ್ ಡಿ.ವಿ ಅವರ ಆಕರ ಗ್ರಂಥವಾಗಿದೆ. ಇದಕ್ಕೆ ಲೇಖಕರ ಬೆನ್ನುಡಿ ಬರಹವಿದೆ; ಪಾಕಿಸ್ತಾನದ ಬಾಹ್ಯ ಬೇಹುಗಾರಿಕಾ ದಳ ಐ.ಎಸ್.ಐ ತನ್ನ ಕ್ರಿಮಿನಲ್ ಕೃತ್ಯಗಳಿಂದಲೇ ಅಪಖ್ಯಾತಿಯನ್ನು ಪಡೆದಿದ್ದರೂ, ಅದರ ಎಲ್ಲ ಚಟುವಟಿಕೆಗಳ ಬಗ್ಗೆ ಹೆಚ್ಚಿನ ವಿವರಗಳು ನಮಗೆ ಲಭ್ಯವಿರಲಿಲ್ಲ. ಆದರೆ ಇದೇ ಮೊದಲಬಾರಿಗೆ ಬೇಹುಗಾರಿಕಾ ವಿಷಯಗಳ ತಜ್ಞರಾದ ಡಾ.ಡಿ.ವಿ.ಗುರುಪ್ರಸಾದ್ ಈ ದಳವು ಹೊದ್ದಿದ್ದ ಮುಸುಕಿನ ಪರದೆಯನ್ನು ತೆರೆದು ಅದರ ನಿಜಸ್ವರೂಪವನ್ನು ಈ ಪುಸ್ತಕದಲ್ಲಿ ಬಿಚ್ಚಿಟ್ಟಿದ್ದಾರೆ. 1948ರಲ್ಲಿ ತಾನು ಸ್ಥಾಪನೆಗೊಂಡಾಗಿನಿಂದ 2024ರ ಜೂನ್‌ವರೆಗೆ ಐ.ಎಸ್.ಐ ಭಾರತದಲ್ಲಿ ನಡೆಸಿರುವ ಇಲ್ಲವೇ ಪ್ರೋತ್ಸಾಹಿಸಿರುವ ಆತಂಕವಾದಿ ಕೃತ್ಯಗಳು, ಪಾಕಿಸ್ತಾನದ ಸೈನ್ಯದ ಜತೆ ಅದಕ್ಕಿರುವ ಸಂಬಂಧ, ಪಾಕಿಸ್ತಾನದ ರಾಜಕೀಯವನ್ನು ತನಗೆ ಬೇಕಾದಂತೆ ತಿರುಗಿಸಿ ತನ್ನ ಸ್ವಾರ್ಥಕ್ಕೆ ಅದು ಬಳಸಿಕೊಂಡಿರುವ ಪರಿ, ತನಗಾಗದವರನ್ನು ನಿರ್ದಯದಿಂದ ನಿರ್ನಾಮ ಮಾಡುವ ಅದರ ನಡೆಗಳು ಮುಂತಾದ ನಾವು ಕೇಳರಿಯದಿದ್ದ ಅನೇಕ ಕುತೂಹಲಕರ ಮಾಹಿತಿಗಳನ್ನು ಲೇಖಕರು ಹೆಕ್ಕಿ ತೆಗೆದು ನಮ್ಮ ಮುಂದಿಟ್ಟಿದ್ದಾರೆ. ಐ.ಎಸ್.ಐ ಎಂದರೇನು, ಅದು ಹೇಗೆ ಕಾರ್ಯನಿರ್ವಹಿಸುತ್ತದೆ? ಇದನ್ನು ಮುನ್ನಡೆಸುವವರು ಯಾರು? ಆತಂಕವಾದಿ ಸಂಘಟನೆಗಳ ಜತೆಗೆ ಅದಕ್ಕಿರುವ ಸಂಬಂಧವೇನು? ಮುಂತಾದವುಗಳ ಬಗ್ಗೆ ತಿಳಿಯಬೇಕೆನ್ನುವವರಿಗೆ ಈ ಪುಸ್ತಕದಲ್ಲಿ ಎಲ್ಲ ಮಾಹಿತಿಯೂ ಸಿಗುತ್ತದೆ. ಕೇವಲ ಭದ್ರತೆ, ಬೇಹುಗಾರಿಕೆ ಮತ್ತು ವಿದೇಶಾಂಗ ವ್ಯವಹಾರಗಳ ವಿಷಯಗಳ ಬಗ್ಗೆ ಆಸಕ್ತಿ ಹೊಂದಿರುವವರಲ್ಲದೆ ಸಾಮಾನ್ಯ ಓದುಗನೂ ಓದಲೇಬೇಕಾದ ಈ ಕುತೂಹಲಕಾರಿ ಪುಸ್ತಕ ಒಂದು ಆಕರ ಗ್ರಂಥವಾಗಿದ್ದು ಕನ್ನಡ ಸಾರಸ್ವತ ಲೋಕಕ್ಕೆ ಒಂದು ಮಹತ್ತರ ಕೊಡುಗೆಯಾಗಿದೆ.

About the Author

ಎಸ್. ಗಂಗಾಧರಯ್ಯ

ಎಸ್. ಗಂಗಾಧರಯ್ಯ ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಾಕಳ್ಳಿಯವರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಮತಿಘಟ್ಟದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಅನೇಕ ಪ್ರಕಟಿತ ಕೃತಿಗಳು ಇಂದು ಕನ್ನಡ ಸಾಹಿತ್ಯ ಲೋಕಕ್ಕೆ ಸೇರ್ಪಡೆಯಾಗಿವೆ.  ನವಿಲ ನೆಲ, ಒಂದು ಉದ್ದನೆಯ ನೆರಳು, ಇವರ ಕಥಾ ಸಂಕಲನಗಳು. ’ಬಯಲ ಪರಿಮಳ’ ಎಂಬ ವ್ಯಕ್ತಿಚಿತ್ರ ಸಂಪುಟವನ್ನು ರಚಿಸಿದ್ದಾರೆ. ವೈಕಂ ಅವರ ಕಥೆಗಳು, ಲೋರ್ಕಾ ನಾಟಕ,- ಎರ್‍ಮಾ, ವಿವಿಧ ಲೇಖಕರ ಕತೆಗಳು, ದಾರಿಯೋ ಫೋ ನಾಟಕ, ಚಿಂಗೀಝ್ ಐತ್ಮತೋವ್ ಕಾದಂಬರಿ ಜಮೀಲಾ, ಇವುಗಳನ್ನು ಕನ್ನಡೀಕರಿಸಿದ್ದಾರೆ. ಕುವೆಂಪು ಭಾಷಾಭಾರತಿಗಾಗಿ ...

READ MORE

Related Books