‘ಪಂಚತಂತ್ರದ ಆಯ್ದ ಕತೆಗಳು’ ಲೇಖಕ ಜಿ.ಕೆ. ಮಧ್ಯಸ್ಥ ಅವರು ಮಕ್ಕಳಿಗಾಗಿ ಸಂಗ್ರಹಿಸಿದ ಕತೆಗಳ ಸಂಕಲನ. ಮಕ್ಕಳ ಜ್ಞಾನವಿಕಾಸ, ಮನರಂಜನೆ, ವ್ಯಕ್ತಿತ್ವ ವಿಕಸನಕ್ಕಾಗಿ ವಸಂತ ಪ್ರಕಾಶನ ಪ್ರಕಟಿಸಿದ ವಿಭಿನ್ನ ಕೃತಿಗಳಲ್ಲಿ ಈ ಕೃತಿಯೂ ಒಂದು. ಮಕ್ಕಳನ್ನು ಆಕರ್ಷಿಸಿ ಹೊಸ ಲೋಕಕ್ಕೆ ಕರೆದೊಯ್ಯುವ ಇಲ್ಲಿನ ಕತೆಗಳು ವಿಭಿನ್ನ ಶೈಲಿಯ ಕತೆಗಳಿಂದ ಕೂಡಿದೆ.
ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...
READ MORE