‘ಪಂಚತಂತ್ರದ ಮನೋಜ್ಞ ಕಥೆಗಳು’ ಲೇಖಕ ಜಿ.ಕೆ. ಮಧ್ಯಸ್ಥ ಅವರು ಮಕ್ಕಳಿಗಾಗಿ ರಚಿಸಿರುವ ಕೃತಿ. ಮಕ್ಕಳ ಮನೋವಿಕಾಸ, ವ್ಯಕ್ತಿತ್ವ ವಿಕಸನದ ಪ್ರಕ್ರಿಯೆಯಲ್ಲಿ ಕತೆಗಳದ್ದು ಮಹತ್ವದ ಪಾತ್ರ, ಮಕ್ಕಳಲ್ಲಿ ಕಲ್ಪನಾ ಶಕ್ತಿ ಮತ್ತು ಸರಿಯಾದ ಜೀವನಕ್ರಮವನ್ನು ತಿಳಿಸಿಕೊಡುವ ಕತೆಗಳನ್ನು ವಸಂತ ಪ್ರಕಾಶನ ಒಂದು ಮಾಲಿಕೆಯಾಗಿ ಪ್ರಕಟಿಸಿದೆ. ಇಲ್ಲಿ ಪಂಚತಂತ್ರದಂತಹ ಮನೋಜ್ಞ ಕಥೆಗಳು ಸಂಕಲನಗೊಂಡಿವೆ.
ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...
READ MORE