ಜೆರೂಸೆಲಂ ಎಂಬ ಯಾತ್ರಾಸ್ಥಳ ಮೂರು ಧರ್ಮೀಯರ ಪವಿತ್ರ ಸ್ಥಳವಾಗಿದೆ. ಎರಡು ಸಾವಿರ ವರ್ಷಗಳಿಂದ ಈ ಪವಿತ್ರ ಸ್ಥಳಕ್ಕೆ ಯಹೂದಿ, ಕ್ರಿಶ್ಚಿಯನ್ ಮತ್ತು ಮುಸ್ಲಿಮರು ಯಾತ್ರೆ ಮಾಡುತ್ತಾರೆ. ಈಗಾಗಲೇ ತಮ್ಮ ಅಧ್ಯಯನಾತ್ಮಕ ಪ್ರವಾಸ ಕಥನಗಳಿಂದ ಕನ್ನಡ ಸಾಹಿತ್ಯಕ್ಕೆ ಹೊಸ ಮೆರುಗು ಕೊಟ್ಟಿರುವ ಆಗುಂಬೆ ಎಸ್. ನಟರಾಜ್ ಅವರು ಜೆರೂಸೆಲಂ ಎಂಬ ಪವಿತ್ರ ಕ್ಷೇತ್ರಕ್ಕೆ ಯಾತ್ರೆ ಕೈಗೊಂಡು ತಮ್ಮ ಪ್ರವಾಸಾನುಭವಗಳನ್ನು ಈ ಪುಸ್ತಕದಲ್ಲಿ ದಾಖಲಿಸಿದ್ದಾರೆ.
ಲೇಖಕ ನಟರಾಜ್, 1939 ನವೆಂಬರ್ 20 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಹುಟ್ಟಿದರು. ತಂದೆ ಎ. ಎಸ್. ಭಟ್, ತಾಯಿ ಲಕ್ಷ್ಮಮ್ಮ. ಕಾಲೇಜು ದಿನಗಳಿಂದಲೂ ಸಾಹಿತ್ಯದ ಬಗ್ಗೆ ಒಲವಿದ್ದು, ನಿವೃತ್ತಿಯ ನಂತರ ಈಗ ಪೂರ್ಣ ಪ್ರಮಾಣದ ಬರಹಗಾರರು. ಸದಾ ಒಂದಿಲ್ಲೊಂದು ಕಡೆ ಪ್ರವಾಸ ಅಥವಾ ಬಿಡುವಿನ ವೇಳೆಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗುತ್ತಾರೆ. ಅವರ ಪ್ರವಾಸಾನುಭವದ ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಬಾತುಕೋಳಿ’ ಮತ್ತು ‘ಆತಂಕ’ ಎಂಬ ಎರಡು ಕಾದಂಬರಿಗಳು. ‘ಚಕ್ಕಂದ’ ಎಂಬ ಹನಿಗವನ ಸಂಕಲನ, ‘ರಸನಿಮಿಷ’ ಎಂಬ ಹಾಸ್ಯಕಥೆಗಳ ಸಂಗ್ರಹ. ‘ರಸ ವೈಚಾರಿಕತೆ’ ಎಂಬ ವೈಚಾರಿಕ ...
READ MORE