ಸಾಹಿತಿ ನಾ ಡಿಸೋಜ ಅವರು ಸಂಪಾದಿಸಿರುವ ಕೃತಿ ಪ್ರಬಂಧ ಸಂಚಯ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿ ’ಪರಿವ್ರಾಜಕ’ ನಂತೆ ನಿರಂತರ ಪ್ರವಾಸ ಮಾಡುತ್ತ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಹೊ ವೆ ಶೇಷಾದ್ರಿಯವರು ಬರವಣಿಗೆಯನ್ನು ವ್ರತದಂತೆ ನಡೆಸಿದವರು. ಶೇಷಾದ್ರಿಯವರು ಮೂರು ದಶಕಗಳಿಗೂ ಹೆಚ್ಚುಕಾಲ ’ಉತ್ಥಾನ’ ಮಾಸಪತ್ರಿಕೆಗೆ ಬರೆದ ಅಂಕಣಬರಹಗಳ ಸಂಕಲನಗಳಿಂದ ಆಯ್ದ ಲೇಖನಗಳ ಸಂಗ್ರಹ, ಈ ಕೃತಿ – ’ಪ್ರಬಂಧ ಸಂಚಯ’.
ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಅವರು 2025 ಜ. 05 ಭಾನುವಾರದಂದು ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ...
READ MORE