ಪ್ರಾಚೀನ ಭಾರತ ಆರ್ ಎಸ್ ಶರ್ಮ ಅವರು ಬರೆದ ಪುಸ್ತಕ. ಕನ್ನಡಕ್ಕೆ ಎನ್ ಪಿ ಶಂಕರನಾರಾಯಣ ರಾವ್ ಅನುವಾದಿಸಿದ್ದಾರೆ. ಇತಿಹಾಸವೆಂದರೆ ರಾಜರ ಆಳ್ವಿಕೆಯಲ್ಲ. ಯುದ್ಧವಲ್ಲ. ಇತಿಹಾಸವೆಂದರೆ ಆ ಖಾಲದ ಜನಜೀವನ. ಅವರ ಆರ್ಥಿಕ ಸ್ಥಿತಿಗತಿಗಳು. ವಿದೇಶಗಳೊಂದಿಗಿನ ಸಂಬಂಧ, ಬಂದು-ಹೋದ ಅತಿಥಿ ಗಣ್ಯರು, ಸಮಾಜ ಸುಧಾರಣೆಗೆ ನಡೆದ ಚಳವಳಿಗಳು. ಇವೆಲ್ಲವುಗಳ ಬೆಸುಗೆ ಇತಿಹಾಸ. ಉತ್ತಮ ಅನುವಾದಕ್ಕಾಗಿ ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1998) ಹಾಗೂ ಭಾರತೀಯ ಪ್ರಕಾಶಕರ ಒಕ್ಕೂಟದ ‘ಅತ್ಯುತ್ತಮ ಮುದ್ರಣ ವಿನ್ಯಾಸ ಪ್ರಶಸ್ತಿ’ (1998) ಲಭಿಸಿದೆ.
.ಎನ್.ಪಿ. ಶಂಕರ ನಾರಾಯಣ ರಾವ್ ಅವರು 1928ರ ಆಗಸ್ಟ್ 03ರಂದು ಹಾಸನ ಜಿಲ್ಲೆಯ ನಿಟ್ಟೂರು ಗ್ರಾಮದವರು. ತಂದೆ ಪಟ್ಟಾಭಿರಾಮಯ್ಯ ಹಾಗೂ ತಾಯಿ ಅಚ್ಚಮ್ಮ. ತಂದೆ ಸಬ್ ರಿಜಿಸ್ಟ್ರಾರ್ ಇದ್ದರು. ವರ್ಗಾವಣೆ ಆದ ಕಡೆ ಇವರ ವಿದ್ಯಾಭ್ಯಾಸ ಅನಿವಾರ್ಯವಾಯಿತು. ಬೆಂಗಳೂರಿನ ಶ್ರೀರಾಮಪುರದಲ್ಲಿ ಪ್ರಾಥಮಿಕ ಶಿಕ್ಷಂ, ಕನಕಪುರದ ಕಾನಕಾನಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆನೇಕಲ್ ಹಾಗೂ ಬಸವನಹಳ್ಳಿಯಲ್ಲಿ ಮಾಧ್ಯಮಿಕ ಹಾಗೂ ಮೈಸೂರಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದರು. ಆ ಕಾಲದಲ್ಲಿ ಸ್ವಾತಂತ್ಯ್ರ ಚಳವಳಿ ಆರಂಭವಾಗಿ, ಜೈಲುವಾಸ ಅನುಭವಿಸಿದರು. ಮೈಸೂರು ಸ್ಟೂಡೆಂಟ್ಸ್ ಯೂನಿಯನ್ ಸ್ಥಾಪಿಸಿ ಎಡ ಪಂಥೀಯ ವಿಚಾರಗಳೊಂದಿಗೆ ಹೋರಾಟ ನಡೆಸಿದರು. ಮೈಸೂರು ಪುರಸಭಾ ಕಾರ್ಮಿಕ ಸಂಘದ ...
READ MORE