ಡಾ. ಶರಣಬಸಪ್ಪ ವಡ್ಡನಕೇರಿ ಅವರ ಕೃತಿ-ಪ್ರಪಂಚದ ಪ್ರತಿಷ್ಠಿತ ವಿಜ್ಞಾನಿಗಳು. ವೈಜ್ಞಾನಿಕ ತತ್ವಗಳು, ನಿಯಮಗಳು ಮತ್ತು ಸಿದ್ಧಾಂತಗಳ ರೂಪದಲ್ಲಿ ಆವಿಷ್ಕಾರಗೊಂಡ ಚಾರಿತ್ರಿಕ ಹಿನ್ನೆಲೆಯಲ್ಲಿ ಅವುಗಳನ್ನು ಪರಿಚಯ ಮಾಡಿಕೊಳ್ಳುವುದು ಅರ್ಥಪೂರ್ಣ ಮತ್ತು ಸ್ವಾರಸ್ಯಕರ, ಅದರಲ್ಲಿ ವಿಜ್ಞಾನಿಗಳ ಜೀವನ ಕಥೆಗಳು. ಆ ನಿಟ್ಟಿನಲ್ಲಿ ಈ ಕೃತಿಯು, ದೇಶಿಯ ಹಾಗೂ ವಿದೇಶದ ಪ್ರತಿಷ್ಠಿತ ವಿಜ್ಞಾನಿಗಳ ಜೀವನ ಚರಿತ್ರೆಯನ್ನು ಕಟ್ಟಿಕೊಡುತ್ತದೆ.
ಲೇಖಕ ಡಾ. ಶರಣಬಸಪ್ಪ ವಡ್ಡನಕೇರಿ ಅವರು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾoವ್ ಗ್ರಾಮದವರು. ಹುಟ್ಟೂರಿನಲ್ಲಿ ಪ್ರಾರ್ಥಮಿಕ, ಪ್ರೌಢ ಶಿಕ್ಷಣ ಪಡೆದು, ನಂತರ, ಗುಲಬರ್ಗಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಅರ್ಥಶಾಸ್ತ್ರ) ಪದವೀಧರರು. ಕುವೆಂಪು ವಿಶ್ವವಿದ್ಯಾಲಯದಿಂದ ಪ್ರಥಮ ರ್ಯಾಂಕ್ ನಲ್ಲಿ ಎಂ. ಎ (ಶಿಕ್ಷಣ) ಪದವೀಧರರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ಎ (ಪತ್ರಿಕೋದ್ಯಮ ) ಪದವೀಧರರು. ಅಲ್ಲದೇ, ಎಂ. ಫಿಲ್ ಮತ್ತು ಪಿ.ಎಚ್ ಡಿ ಹಾಗೂ ಡಿ. ಲಿಟ್ ಪದವೀಧರರು. ತಾಯಿಯವರ ಹೆಸರಿನಲ್ಲಿ ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನ ಸ್ಥಾಪಿಸಿ, ಆ ಮೂಲಕ 60 ಕ್ಕಿಂತ ಹೆಚ್ಚು ...
READ MORE