ಪತ್ರಕರ್ತ ರವಿ ಬೆಳಗೆರೆ ಅವರ ಕೃತಿ-ಸೈಕೋಪಾತ್. ಸರಣಿ ಹಂತಕರ ಕುರಿತು ಬರೆದ ಕೃತಿ ಇದು. ಮೇಲ್ನೋಟಕ್ಕೆ ಸರಳ ಹಾಗೂ ಸಹಜ ಮನುಷ್ಯನಂತೆ ಕಂಡರೂ ಇವರ ವಿಚಾರಗಳು ಭಯಂಕರವಾಗಿರುತ್ತವೆ. ಇಂತಹ ವ್ಯಕ್ತಿತ್ವ ಉಳ್ಳವರಿಗೆ ಸೈಕೋಪಾತ್ ಎನ್ನುತ್ತಾರೆ. ಈ ಮನಸ್ಥಿತಿಯ ವ್ಯಕ್ತಿಗಳನ್ನು ಪರಿಚಯಿಸುವುದು ಈ ಕೃತಿಯ ಉದ್ದೇಶ. ಬಹುತೇಕ ಇಲ್ಲಿಯ ಬರೆಹಗಳು, ಲೇಖಕರು ಸಂಪಾದಕರಾಗಿದ್ದ ‘ಹಾಯ್ ಬೆಂಗಳೂರು’ ವಾರಪತ್ರಿಕೆಯಲ್ಲಿ ಸರಣಿ ಕಥೆಗಳಾಗಿ ಪ್ರಕಟಗೊಂಡಿದ್ದವು.
ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...
READ MORE