ಪುರಾಣಗಳ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿರುವ ತೆಲುಗು ಭಾಷೆಯ ವಿಚಾರವಾದಿ ಡಾ. ವಿಜಯಭಾರತಿಯವರ ಕೃತಿಯನ್ನು ಬಿ. ಸುಜ್ಞಾನಮೂರ್ತಿ ಕನ್ನಡಕ್ಕೆ ತಂದಿದ್ದಾರೆ.
ಪುರಾಣಗಳು ಮತ್ತು ಜಾತೀ ವ್ಯವಸ್ಥೆ ಒಂದರೊಳಗೊಂದು ಬೆಸೆದುಕೊಂಡ ರೀತಿಯನ್ನು ಸತ್ಯ ಹರಿಶ್ಚಂದ್ರನ ಕಥೆಯಲ್ಲಿ ಮತ್ತು ರಾಮಾಯಣ ಕತೆಯಲ್ಲಿ ಶೋಧಿಸಿ, ಅಧ್ಯಯನ ನಡೆಸಿ ಹೊರತೆಗೆದಿದ್ದಾರೆ. ಇದರ ಅನುವಾದ ಕಾರ್ಯಕ್ಕೆ ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿ ಪಡೆದುಕೊಂಡ ಬಿ. ಸುಜ್ಞಾನಮೂರ್ತಿ ’ಪುರಾಣಗಳು ಜಾತಿವ್ಯವಸ್ಥೆ ಸತ್ಯಹರಿಶ್ಚಂದ್ರ ’ ಕೃತಿಯನ್ನು ಕನ್ನಡಕ್ಕೆ ತಂದಿದ್ಧಾರೆ.
ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...
READ MORE