ಟಿಪ್ಪುವಿನ ಕಾಲದ ರಾಜಕೀಯ ಪಲ್ಲಟಗಳು, ಸಾಮಾಜಿಕ ಹೋರಾಟಗಳು, ಸ್ತ್ರೀಪರ ಆಂದೋಲನಗಳು ಹೀಗೆ ಆ ಕಾಲಘಟ್ಟದ ವಿಷಯಗಳ ಕುರಿತು ಬರೆದಿರುವ ಕೃತಿ ರಾಜಧರ್ಮ. ಮೈಸೂರು ಸಂಸ್ಥಾನದ ಚರಿತ್ರೆಯ ಜೊತೆಗೆ ಆ ಅವಧಿಯಲ್ಲಿನ ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ವಿಷಯಗಳ ಕುರಿತು ಬರೆದಿದ್ದಾರೆ. ಸಾಂಸ್ಕøತಿಕವಾಗಿ ವಿಶಿಷ್ಟವೂ ಮಹತ್ವವೂ ಆದ ಈ ರಾಜಕೀಯ ಪಠ್ಯಗಳನ್ನು `ರಾಜಧರ್ಮ’ ಎಂಬ ಪರಿಕಲ್ಪನೆಯ ಮೂಲಕ ವಿಶ್ಲೇಷಿಸಲು ಈ ಕೃತಿಯಲ್ಲಿ ಯತ್ನಿಸಲಾಗಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿರುವ ರಹಮತ್ ತರೀಕೆರೆ ಅವರು ಸಂಶೋಧಕ, ವಿಮರ್ಶಕ, ಲೇಖಕ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಸಮತಳದವರಾದ (ಜ. 1959) ಅವರು ಮೈಸೂರು ವಿಶ್ವವಿದ್ಯಾಲಯದಿಂದ ಏಳು ಚಿನ್ನದ ಪದಕಗಳೊಂದಿಗೆ ಎಂ.ಎ. ಪದವಿ ಪಡೆದಿದ್ದಾರೆ. ಸ್ಪಷ್ಟ ಸೈದ್ಧಾಂತಿಕ ನಿಲುವು ಹೊಂದಿರುವ ರಹಮತ್ ಅವರು ಬಂಡಾಯ ಸಾಹಿತ್ಯ ಸಂಘಟನೆಯಲ್ಲಿದ್ದವರು. ಪಶ್ಚಿಮದ ಲೇಖಕರಿಗಿಂತ ಭಾರತೀಯ ಭಾಷೆಗಳ ಲೇಖಕರಿಂದ ಕಲಿಯುವ ಅಗತ್ಯವಿದೆಯೆಂದು ಭಾವಿಸುವ ‘ದೇಸಿವಾದಿ’ ಲೇಖಕ. ‘ಆಧುನಿಕ ಕನ್ನಡ ಕಾವ್ಯ ಮತ್ತು ಪ್ರತಿಭಟನೆ’ ವಿಷಯದ ಮೇಲೆ ಪ್ರಬಂಧ ಬರೆದು ಪಿಎಚ್.ಡಿ. ಪದವಿ ಪಡೆದಿರುವ ಅವರ ಮೊದಲ ...
READ MORE