ಪ್ರಸಕ್ತ ರಾಜಕೀಯ ಸೇರಿದಂತೆ ಸಮಗ್ರ ವಲಯಗಳ ಹದಗೆಟ್ಟ ಚಿತ್ರಣದ ಹಿನ್ನೆಲೆಯಲ್ಲಿ ಲೇಖಕ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಅವರು ತಮ್ಮ ಸೂಕ್ಷ್ಮ ಚಿಕಿತ್ಸಕ ನೋಟದಿಂದ ವಿಶ್ಲೇಷಿಸಿರುವ ಲೇಖನಗಳ ಸಂಗ್ರಹ. ಈ ಲೇಖನಗಳು ವಿವಿಧ ಪತ್ರಿಕೆಯಲ್ಲಿ ಅಂಕಣ ಬರಹಗಳಾಗಿ ಪ್ರಕಟಗೊಂಡಿವೆ. ರಾಜನೀತಿ ಹಾಗೂ ರಾಜಧರ್ಮ -ಈ ಎರಡೂ ಪರಿಕಲ್ಪನೆಗಳನ್ನು ಪ್ರಸಕ್ತ ವಿದ್ಯಮಾನಗಳೊಂದಿಗೆ ತಳಕು ಹಾಕಿ ಬರೆದಿದ್ದು, ಇಂದಿನ ವ್ಯವಸ್ಥೆ ಸಾಗುತ್ತಿರುವ ದುರ್ಘಟನೆಯ ದಿಕ್ಕನ್ನು ಸ್ಪಷ್ಟವಾಗಿಸುತ್ತದೆ ಮಾತ್ರವಲ್ಲ; ಉತ್ತಮ ಮಾರ್ಗದಲ್ಲಿ ನಡೆಸುವ ಸಲಹೆಗಳು ಕೃತಿಯಲ್ಲಿವೆ.
ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...
READ MORE