ಅನುವಾದಕ ಬಿ. ಸುಜ್ಞಾನಮೂರ್ತಿ ಅವರ ಅನುವಾದ ಕೃತಿ ರಾಮಾಯಣ ದಿಟ ಓದು. 'ರಾಮಾಯಣ ದಿಟ ಓದು' ಆರ್ಯರ ಹುಸಿಶ್ರೇಷ್ಠತೆಯನ್ನು ಸಾರುವ ರಾಮಾಯಣವನ್ನು ಉಗ್ರ ವಿಮರ್ಶೆಗೆ ಒಡ್ಡಿದ ಕೃತಿ. ದ್ರಾವಿಡ ಸಂಸ್ಕೃತಿಯ ನೇತಾರ ಪೆರಿಯಾರ್ ನಿರಂತರ ನಲವತ್ತು ವರ್ಷಗಳ ಕಾಲ ರಾಮಾಯಣದ ಆಳ ಅಗಲಗಳನ್ನು ಅಧ್ಯಯನ ಮಾಡಿದ ಪರಿಣಾಮದಿಂದ ರಚಿಸಿದ ವೈಚಾರಿಕ ಕೃತಿ. ರಾಮಾಯಣದ ಅಸಂಬದ್ಧ ಮತ್ತು ಅವೈಜ್ಞಾನಿಕ ಸಂಗತಿಗಳನ್ನು ಇಲ್ಲಿ ಅನಾವರಣಗೊಳಿಸಲಾಗಿದೆ.
ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...
READ MORE