ಖ್ಯಾತ ಇಂಗ್ಲಿಷ್ ಬೇಟೆಗಾರ ಜಿಮ್ ಕಾರ್ಬೆಟ್ನ 'ಮ್ಯಾನ್ ಈಟಿಂಗ್ ಲೆಪರ್ಡ್ ಆಫ್ ರುದ್ರಪ್ರಯಾಗ್' ಪುಸ್ತಕವನ್ನು ತೇಜಸ್ವಿಯವರು ರುದ್ರಪ್ರಯಾಗದ ಭಯಾನಕ ನರಭಕ್ಷಕ (1995) ಶೀರ್ಷಿಕೆಯಲ್ಲಿ ರೂಪಾಂತರ ಮಾಡಿ ಪ್ರಕಟಿಸಿದ್ದಾರೆ. ಭಾರತದಲ್ಲಿ ಬೆಳೆದ ಜಿಮ್ ಕಾರ್ಬೆಟ್ ತನ್ನ ಕೃತಿಯಲ್ಲಿ ತಾನು ಪ್ರಯಾಗದಲ್ಲಿ ನಡೆಸಿದ ಸಾಹಸಗಳನ್ನು, ಘರ್ನಾಲ್ ರೈತರೊಂದಿಗಿನ ತನ್ನ ಬೇಟೆಯ ಅನುಭವಗಳನ್ನು ಸಹಜವಾಗಿ, ಜೀವಂತವಾಗಿ ನಿರೂಪಿಸಿದ್ದಾನೆ. ಅದನ್ನು ತೇಜಸ್ವಿ ಇಲ್ಲಿ ಅಷ್ಟೇ ಸಹಜವಾದ ಜೀವಂತ ರೀತಿಯಲ್ಲಿ ಕನ್ನಡೀಕರಿಸಿದ್ದಾರೆ.
ಕನ್ನಡದ ಹೆಸರಾಂತ ಲೇಖಕ ಕುವೆಂಪು ಅವರ ಪುತ್ರರಾಗಿರುವ ಪೂರ್ಣಚಂದ್ರ ತೇಜಸ್ವಿ ಅವರು 08-09-1938ರದು ಜನಿಸಿದರು. ತಮ್ಮ ಬರವಣಿಗೆಯ ಮೂಲಕವೇ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ’ಚಿದಂಬರ ರಹಸ್ಯ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತೇಜಸ್ವಿ ಅವರು ಕನ್ನಡದಲ್ಲಿ ನವ್ಯ ಸಾಹಿತ್ಯ ಚಳುವಳಿಯು ಉಚ್ಛ್ರಾಯ ಸ್ಥಿತಿಯಲ್ಲಿದ್ದ ದಿನಗಳಲ್ಲಿ ಅದಕ್ಕಿಂತ ಭಿನ್ನವಾದ ನೆಲೆಯ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು. ನವ್ಯ ಲೇಖಕರು ನಗರ ಕೇಂದ್ರಿತ, ವ್ಯಕ್ತಿನಿಷ್ಟ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಬದುಕು ಕುರಿತ ಮತ್ತು ಅದು ಹಳಹಳಿಕೆಯ ಧ್ವನಿಯಲ್ಲಿ ಇರದ ಹಾಗೆ ನೋಡಿಕೊಂಡರು. ಲೋಹಿಯಾ ಚಿಂತನೆಗಳಿಂದ ಪ್ರೇರಿತರಾಗಿದ್ದ ...
READ MORE