‘ಕಾಳಿದಾಸನ ಋತುಸಂಹಾರಂ’ ಅನ್ನು ತುಂಬಾ ಶ್ರದ್ಧೆವಹಿಸಿ ಕನ್ನಡಕ್ಕೆ ಅನುವಾದಿಸಿದ ಕೃತಿ-ಋತುಗಳ ಹೆಣಿಗೆ. ಋತುಗಳ ಸೃಷ್ಟಿ, ಅವುಗಳ ಸೌಂದರ್ಯ, ಜಗತ್ತಿನ ಮೇಲೆ ಅವುಗಳ ಪರಿಣಾಮ, ಮನುಷ್ಯನ ವರ್ತನ, ವಿಚಾರ ಹಾಗೂ ಭಾವಗಳ ಮೇಲಿನ ಪರಿಣಾಮ ಹೀಗೆ ಎಲ್ಲವನ್ನೂ ಸುಂದರವಾಗಿ ಮೂಲಕ್ಕೆ ಧಕ್ಕೆಯಾಗದಂತೆ ಅನುವಾದಿಸಿದ್ದು, ಈ ಕೃತಿಯ ಹೆಗ್ಗಳಿಕೆ.
ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರು. ಇವರು ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936 ರಲ್ಲಿ ಜನಿಸಿದರು. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದಾರೆ. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಬಾಣಭಟ್ಟನ ಕಾದಂಬರಿ, ಕಾಳಿದಾಸನ ಶಾಕುಂತಲಾ, ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು. ಅನೇಕ ಸೂಕ್ತ ಮಂತ್ರಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಪುರುಷಸೂಕ್ತ, ಶ್ರೀ ಮದ್ಭಗವದ್ಗೀತೆ, ಶ್ರೀ ಸೂಕ್ತ , ಶಿವಸೂಕ್ತ, ...
READ MORE