ಭಾರತೀಯ ತತ್ವಜ್ಞಾನಿ ಖ್ಯಾತಿಯ ಜಿಡ್ಡು ಕೃಷ್ಣಮೂರ್ತಿ ಅವರ ಕೃತಿ-ಸಾಮಾಜಿಕ ಹೊಣೆಗಾರಿಕೆ. ಲೇಖಕ ಮಹಾಬಲೇಶ್ವರ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಪ್ರತಿಯೊಬ್ಬನಿಗೂ ಸಾಮಾಜಿಕ ಹೊಣೆಗಾರಿಕೆ ಇದೆ. ಪ್ರತಿ ಜೀವಿಯ ಬೆಳವಣಿಗೆಗೆ ಸುತ್ತಲಿನ ಸಮಾಜವೂ ಹೊಣೆಯಾಗಿರುತ್ತದೆ. ಅದಕ್ಕಾಗಿ ಪ್ರತಿ ಜೀವಿಯೂ ಆ ಸಮಾಜಕ್ಕೆ ಋಣ ತೀರಿಸುವುದೇ ಸಾಮಾಜಿಕ ಹೊಣೆಗಾರಿಕೆ. ಈ ಹಿನ್ನೆಲೆಯಲ್ಲಿ, ಪ್ರತಿಯೊಬ್ನನೂ ಈ ಸಮಾಜದ ಆರೋಗ್ಯಕ್ಕಾಗಿ ಕೊಡುಗೆ ನೀಡಲೇಬೇಕು. ಸಾಮಾಜಿಕ ಹೊಣೆಗಾರಿಕೆಯಿಂದ ಯಾವ ಜೀವಿಯೂ ಹೊರತಲ್ಲ ಎಂಬ ಎಚ್ಚರಿಕೆ ಹಾಗೂ ಮಹತ್ವದ ವಿಷಯವನ್ನು ವಿಸ್ತಾರವಾಗಿ ವಿವರಿಸಿರುವ ಕೃತಿ ಇದು. ಸಾಮಾಜಿಕ ಹೊಣೆಗಾರಿಕೆ ಕುರಿತು ಜಿಡ್ಡು ಕೃಷ್ಣಮೂರ್ತಿ ಅವರ ಬೋಧನೆಗಳನ್ನು ಇಲ್ಲಿ ಸಂಗ್ರಹಿಸಲಾಗಿದೆ.
ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ. ...
READ MORE