ಖ್ಯಾತ ವಿದ್ವಾಂಸ ಶತಾವಧಾನಿ ಡಾ. ಆರ್. ಗಣೇಶ ಅವರ ಕೃತಿ-ಸಾಮಾನ್ಯ ಧರ್ಮ. ವ್ಯವಸ್ಥೆಯಲ್ಲಿ ಒಬ್ಬ ಸಾಮಾನ್ಯ ಪ್ರಜೆಯು ಅನುಸರಿಸಲೇ ಬೇಕಾದ ನೀತಿ-ನಿಯಮಗಳ ಕುರಿತು ವಿಸ್ತೃತವಾದ ಮಾಹಿತಿಯನ್ನು ಒಳಗೊಂಡ ಕೃತಿ ಇದು. ಧರ್ಮ ಎಂದರೆ ನಡವಳಿಕೆ. ಅದು ಜಾತಿ-ಧರ್ಮದ ಎಲ್ಲ ಕಟ್ಟುಗಳನ್ನು ಮೀರಿದ್ದು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಇಂತಹ ನಿಯಮಗಳು ಅಗತ್ಯ ಹಾಗೂ ಅನಿವಾರ್ಯ ಎಂಬರ್ಥದಲ್ಲಿ ‘ಸಾಮಾನ್ಯ ಧರ್ಮ’ ಎಂಬ ಪರಿಕಲ್ಪನೆಯಲ್ಲಿ ವಿಷಯವನ್ನು ಸಾದರಪಡಿಸಿದ್ದು, ಭಾರತೀಯ ಪ್ರಾಚೀನ ಪರಂಪರೆಯಲ್ಲಿ ಸಾಮಾನ್ಯ ಧರ್ಮದ ಹಿರಿಮೆಯನ್ನೂ ಸಹ ಚರ್ಚಿಸಲಾಗಿದೆ.
ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...
READ MORE