ಸ್ವಾತಂತ್ರಹೋರಾಟ ಹಾಗೂ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಸಕ್ರಿಯರಾಗಿದ್ದ ಬಿ.ವಿ. ಕಕ್ಕಿಲ್ಲಾಯ ಅವರು ಶಾಸನ ಸಭೆಗಳಲ್ಲಿ ನಡೆಸಿದ ಚರ್ಚೆ ಗಮನಾರ್ಹವಾದದ್ದು. ಜನಪ್ರಿಯ ಶಾಸಕರಾಗಿದ್ದ ಕಕ್ಕಿಲ್ಲಾಯ ಅವರ ಪ್ರಖರ ಚಿಂತಕರೂ ಹೌದು. ಕಕ್ಕಿಲ್ಲಾಯರ ಬದುಕು-ಸಾಧನೆಯನ್ನು ಈ ಕೃತಿಯು ಕಟ್ಟಿಕೊಡುತ್ತದೆ. ಕಾಂತಾವರ ಕನ್ನಡ ಸಂಘದ ನಾಡಿಗೆ ನಮಸ್ಕಾರ ಸರಣಿಯ 90ನೇ ಕೃತಿಯಿದು.
ಸದ್ಯ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಅಧ್ಕಕ್ಷ ಹಾಗೂ ಪ್ರಸಾರಾಂಗದ ನಿರ್ದೇಶಕರಾಗಿರುವ ನಿತ್ಯಾನಂದ ಬಿ. ಶೆಟ್ಟಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಕೋಟೆಕಾರು ಗ್ರಾಮದ ಬಲ್ಯಬಾಳಿಕೆಯವರು. ಮಂಗಳೂರು ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಎಂ.ಎ. ಹಾಗೂ ಪಿಹೆಚ್.ಡಿ ಪದವಿ ಪಡೆದವರು. 1997ರಲ್ಲಿ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು 1998ರಿಂದ2008 ರವರೆಗೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರಿನ ಮಹೇಶ್ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿದ್ದ ಅವರು ಎರಡು ವರ್ಷ ಅವಧಿಯಲ್ಲಿ ಕಾಲೇಜನ್ನು ರಾಜ್ಯ ...
READ MORE