ಕಾದಂಬರಿಗಾರ್ತಿ ಸಾಯಿಸುತೆ ಅವರ ಸಾಮಾಜಿಕ ಕಾದಂಬರಿ `ಸಂಧ್ಯಾ ಗಗನ’. ಮೊದಲು ಈ ಕಾದಂಬರಿ ಧರ್ಮಸ್ಥಳದ ಮಂಜುವಾಣಿ ಮಾಸ ಪತ್ರಿಕೆಯಲ್ಲಿ ಪ್ರಕಟವಾಗುತ್ತಿತ್ತು. ಕಾದಂಬರಿಯ ವಸ್ತು ಸಾಮಾಜಿಕವಾಗಿದೆ, ಮತ್ತು ಕಾದಂಬರಿಯು ಓದುಗರನ್ನು ಸಾಹಿತ್ಯಿಕ ಅಂಶಗಳಾದ ನಿರೂಪಣಾ ಶೈಲಿ, ಪಾತ್ರಗಳ ಸೆಟ್ಟಿಂಗ್ ಮತ್ತು ಪಾತ್ರದ ಸೃಷ್ಟಿಯಿಂದ ಸೆಳೆಯುತ್ತದೆ. ಈ ಕಾದಂಬರಿಯು 1991ರಲ್ಲಿ ಮೊದಲ ಮುದ್ರಣ ಕಂಡಿದ್ದು, 2015ರಲ್ಲಿ ಎರಡನೆ ಮುದ್ರಣ ಕಂಡಿದೆ.
ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ. ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...
READ MORE