ಡಾ. ಬಿ.ಆರ್. ಅಂಬೇಡ್ಕರ್ ಅವರು 1928ರಲ್ಲಿಯೇ ’ದೇಶದ ಆದಾಯದಿಂದ ಮೊಟ್ಟಮೊದಲು ಖರ್ಚು ಮಾಡಬೇಕಾದ ಬಾಬು ಯಾವುದಾದರೂ ಇದ್ದರೆ ಅದು ತಳಸಮುದಾಯಗಳ ಶಿಕ್ಷಣಕ್ಕಾಗಿಯೇ ಎಂದು ಗುರುತಿಸಬೇಕು’ ಎಂದು ಅಭಿಪ್ರಾಯಪಟ್ಟಿದ್ದರು. ಅವರ ಆಶಯ-ಅಭಿಪ್ರಾಯದ ಮೇರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶೈಕ್ಷಣಿಕ ಪ್ರಗತಿಗಾಗಿ ವಿಶೇಷ ಅನುದಾನ ಮೀಸಲಿಡಲಾಗಿದೆ. ಆದರೆ, ಅದನ್ನು ಸರಿಯಾಗಿ ಬಳಸಿಕೊಳ್ಳದೇ ಮರಳಿ ಕಳುಹಿಸುವ ಹುನ್ನಾರ ನಡೆಯುತ್ತಿದೆ. ಅನುದಾನ ಬಳಸದೇ ಇರುವ ಕುರಿತು ಬೊಜ್ಜಾ ತಾರಕಂ ಅವರು ತೆಲುಗಿನಲ್ಲಿ ಬರೆದ ಪುಸ್ತಕವನ್ನು ಬಿ.ಸುಜ್ಞಾನಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.
ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...
READ MORE