ಬೇಂದ್ರೆ ಎನ್. ಮಂಜುನಾಥ ಅವರು ಮಕ್ಕಳಿಗಾಗಿ ಬರೆದ ರಷ್ಯಾ ಹಾಗೂ ನೆರೆ ದೇಶಗಳ ಜಾನಪದ ಕಥೆಗಳ ಪುಸ್ತಕವಿದು-ಸರ್ವರಿಗೂ ಸಮಪಾಲು. ವಿವಿಧ ದೇಶಗಳಜಾನಪದ ಕಥೆಗಳ ರೂಪಾಂತರವಿದು. ಇಲ್ಲಿಯ ಜಾಣ ಕಥೆಗಳು, ನೀತಿ ಕಥೆಗಳು, ಪ್ರಾಣಿ ಕಥೆಗಳು ಮಕ್ಕಳಿಗೆ ಮನೋರಂಜನೆಯೊಂದಿಗೆ ನೀತಿಯನ್ನು ಹೇಳುತ್ತವೆ. ಕತೆಗೆ ಪೂರಕವಾದ ಇಲ್ಲಿಯ ಚಿತ್ರಗಳು ಮಕ್ಕಳ ಆಸಕ್ತಿಯನ್ನು ಹೆಚ್ಚಿಸುತ್ತವೆ.
ಲೇಖಕ, ಚಿಂತಕ, ಅಂಕಣಕಾರರಾದ ಬೇದ್ರೆ ಮಂಜುನಾಥ್ ಮೂಲತಃ ಶಿವಮೊಗ್ಗದವರು, 10-06-1967ರಲ್ಲಿ ಕಡುಬಡತನದ ಕುಟುಂಬದಲ್ಲಿ ಹುಟ್ಟಿದ ಮಂಜುನಾಥ್ ಸದಾ ಕ್ರಿಯಾಶೀಲ ವ್ಯಕ್ತಿ. ತಮ್ಮ ಸ್ವ-ಪರಿಶ್ರಮದಿಂದಲೇ ಬೆಳೆದಿರುವ ಅವರು ಈ ವರೆಗೂ 50ಕ್ಕಿಂತಲೂ ಹೆಚ್ಚಿನ ಪುಸ್ತಕಗಳನ್ನು ರಚಿಸಿದ್ದಾರೆ. ಸದ್ಯ ಆಕಾಶವಾಣಿ ಮೈಸೂರು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಜುನಾಥ್ ಅವರು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಬಿ.ಎ ಓದುವಾಗಲೇ ಇಂಗ್ಲೀಷ್ ಗ್ರಾಮರ್ ಬಗ್ಗೆ ಪುಸ್ತಕ ಪ್ರಕಟಿಸಿದ್ದರು. ಈ ಪುಸ್ತಕ 10 ಬಾರಿ ಮರು ಮುದ್ರಣಕಂಡು ದಾಖಲೆ ಸೃಷ್ಟಿಸಿತ್ತು. ಆನಂತರ ಕುವೆಂಪು ವಿವಿಯಲ್ಲಿ ಇತಿಹಾಸದಲ್ಲಿ ಪ್ರಥಮರಾಗಿ ಪದವಿ ಗಳಿಸಿದ್ದರು. ಇಂಗ್ಲೀಷಿನಲ್ಲಿ ಎಂ.ಎ.ಮಾಡಲು ಬಯಸಿದ್ದ ಅವರು ಮೈಸೂರಿಗೆ ತೆರಳಿದರು. ಎಂ.ಎ ...
READ MORE