ಹಿರಿಯ ಲೇಖಕ ಶತಾವಧಾನಿ ಆರ್. ಗಣೇಶ್ ಅವರ ಕೃತಿ-ಷಡ್ದರ್ಶನ ಸಂಗ್ರಹ. ಷಡ್ದರ್ಶನಗಳು ಜೀವನ ಮುಕ್ತ-ಮೋಕ್ಷಕ್ಕೆ ದಾರಿ ಎಂದು ಹೇಳಲಾಗುತ್ತದೆ. ಪ್ರತಿ ದರ್ಶನಗಳು ಜೀವನದ ಆಯಾಮಗಳನ್ನು ಪರಿಚಯಿಸುತ್ತವೆ. ಇಂತಹ ವಿಷಯ ವಸ್ತು ಇರುವ ಕೃತಿ.
ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...
READ MORE