‘ಶಾಂತಿನಿಕೇತನ’ -ಎಂಬ ಮತ್ತೊಬ್ಬನದಲ್ಲದ ಆತ್ಮಚರಿತ್ರೆ -ಲೇಖಕ ಎಚ್.ಎ. ಅನಿಲ್ ಕುಮಾರ್ ಅವರ ಆತ್ಮಚರಿತ್ರೆ ರೂಪದ ಅನುಭವ ಕಥನ. ಸ್ವತಃ ಕಲಾವಿದರಾಗಿರುವ ಎಚ್.ಎ. ಅನಿಲ್ ಕುಮಾರ್ ಅವರು ಕಲಾಬದುಕಿನ ಅನುಭವಗಳಿಗೆ ಸುಂದರ ರೂಪ ನೀಡಿದ್ದಾರೆ. ಶಾಂತಿನಿಕೇತನದ ಪಯಣದ ಕುರಿತಾಗಿ ತಮ್ಮದೇ ಆತ್ಮಚರಿತ್ರೆಯ ಭಾಗವಾಗಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ.
ಎಚ್.ಎ.ಅನಿಲ್ ಕುಮಾರ್ ಕಲಾ ವಿಮರ್ಶಕರು, ಚಿತ್ರಕಲಾ ಪರಿಷತ್ತಿನ ಕಲಾ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಕಲೆಗೆ ಸಂಬಂಧಿಸಿದ ಬರಹಗಳ ಮೂಲಕ ಕನ್ನಡ ಮತ್ತು ಇಂಗ್ಲಿಷ್ ಓದುಗರಿಬ್ಬರಿಗೂ ಪರಿಚಿತರು. ಇವರಿಗೆ ದೆಹಲಿ ಕಲಾ ಶಾಲೆ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಕಲಾ ಶಿಕ್ಷಕರಿಗೆ ನೀಡುವ ಪ್ರತಿಷ್ಠಿತ ಬಿ.ಸಿ.ಸನ್ಯಾಲ್ ಪ್ರಶಸ್ತಿ ನೀಡಿ ಗೌರವಿಸಿದೆ. ಮೊದಲ ಬಾರಿಗೆ ಕರ್ನಾಟಕದ ಕಲಾ ಶಿಕ್ಷಕರೊಬ್ಬರಿಗೆ ಈ ಪ್ರಶಸ್ತಿ ದೊರೆತಿದೆ. ಶಾಂತಿನಿಕೇತನದ ವಿಶ್ವಭಾರತಿ ವಿಶ್ವವಿದ್ಯಾಲಯದ ಕಲಾ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಚಿತ್ರಕಲಾ ಪರಿಷತ್ತಿನ ಹಳೆಯ ವಿದ್ಯಾರ್ಥಿಯೂ ಹೌದು. ಲಂಡನ್ನ ರಾಯಲ್ ಕಾಲೇಜ್ನಲ್ಲಿ ಸಮಕಾಲೀನ ಕ್ಯುರೇಶನ್ ...
READ MORE