ಶಾಸನಗಳನ್ನು ಇತಿಹಾಸದ ಅಧ್ಯಯನಕ್ಕೆ ಆಕರಗಳಾಗಿ ಬಳಸಿಕೊಳ್ಳುವುದುಮೊದಲಿನಿಂದಲೂ ನಡೆದುಬಂದಿರುವ ಪದ್ಧತಿ. ನಂತರ ಶಾಸನಗಳು ಸಂಸ್ಕೃತಿ ಮತ್ತು ಭಾಷೆಯ ಅಧ್ಯಯನಕ್ಕೂ ಮಹತ್ವವನ್ನು ದೊರಕಿಸಿಕೊಟ್ಟಿವೆ. ಈ ನಿಟ್ಟಿನಲ್ಲಿ ಕವಿರಾಜಮಾರ್ಗಕ್ಕೆ ಮೊದಲಿನ ಭಾಷೆಯ ವಿಚಾರವಾಗಿ ತಿಳಿಯಲು ಶಾಸನಗಳೇ ಪ್ರಮುಖ ಆಕರಗಳು. 'ಮೈಸೂರು ಒಡೆಯರ ಆಳ್ವಿಕೆಯಲ್ಲೂ ಶಾಸನಗಳ ಮೂಲಕ ಹಲವು ವಿಚಾರಗಳು ತಿಳಿದಿವೆ. ಆದ್ದರಿಂದ ಭಾಷೆಯ ಬದಲಾದ ಸ್ವರೂಪವನ್ನು ತಿಳಿಯಲು ಶಾಸನಗಳು ನೆರವಿಗೆ ಬರುತ್ತವೆಂಬ ಕಾರಣದಿಂದ, ಆ ಕುರಿತು, ಗೋಪಾಲ ರಾವ್ ಅವರು ಮಾಡಿದ್ದ ಕೆಲವು ಭಾಷಣಗಳು ಮತ್ತು ಬರೆದಿದ್ದ ಲೇಖನಗಳನ್ನು ಒಟ್ಟುಗೂಡಿಸಿ ಶಾಸನ ಅಧ್ಯಯನ ಕೃತಿಯನ್ನು ಓದುಗರ ಮುಂದಿಟ್ಟಿದ್ದಾರೆ.
ಡಾ. ಎಚ್.ಎಸ್. ಗೋಪಾಲರಾವ್ ಅವರು 1946ರ ನವೆಂಬರ್ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು. ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ. ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ. ಜೇನು ನಂಜು, ...
READ MORE