`ಶತಮಾನದ ಸಣ್ಣಕತೆ’ ಬೊಳುವಾರು ಮಹಮದ್ ಕುಂಞ್ ಅವರ ಸಂಪಾದಿತ ಸಣ್ಣಕಥಾ ಸಂಕಲನವಾಗಿದೆ. ಸಣ್ಣಕತೆ ಹೊಸಗನ್ನಡ ಸಾಹಿತ್ಯದಲ್ಲಿ ಒಂದು ಪ್ರಕಾರವಾಗಿ ರೂಪುಗೊಂಡಿದ್ದರೂ ಕತೆಯನ್ನು ಹೇಳುವ ಪರಂಪರೆ ಹೊಸದೇನೂ ಅಲ್ಲ. ಇಂಗ್ಲೀಷ್ ಸಾಹಿತ್ಯದ ಪರಿಚಯದಿಂದ ಸಣ್ಣಕತೆಯ ಮಾದರಿ ಹುಟ್ಟಿಕೊಂಡಿದೆ ಎಂಬುವುದು ಬಹುತೇಕರ ಅಭಿಪ್ರಾಯ. ಅಂಥ ಗ್ರಹಿಕೆಯಿಂದ ಇಪ್ಪತ್ತನೆಯ ಶತಮಾನದ ಆರಂಭದಿಂದ ಇದುವರೆಗೆ ಬಂದಿರುವ ಕಥಾ ಸಾಮಾಗ್ರಿಯನ್ನು ನೋಡಲಾಗುತ್ತಿದೆ.
ಕನ್ನಡದ ವಿಶಿಷ್ಟ ಕತೆಗಾರ ಬೊಳುವಾರು ಮಹಮದ್ ಕುಂಞ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ‘ಅತ್ತ, ಇತ್ತಗಳ ಸುತ್ತಮುತ್ತ’. ದೇವರುಗಳ ರಾಜ್ಯದಲ್ಲಿ, ಅಂಕ, ಆಕಾಶಕ್ಕೆ ನೀಲಿ ಪರದೆ, ಒಂದು ತುಂಡು ಗೋಡೆ, ಅವರ ಕಥಾಸಂಗ್ರಹಗಳು. ತಟ್ಟು ಚಪ್ಪಾಳೆ ಪುಟ್ಟ ಮಗು ಅವರು ಸಂಪಾದಿಸಿದ ಮಕ್ಕಳ ಪದ್ಯಗಳ ಸಂಕಲನ. ಜಿಹಾದ್, ಸ್ವಾತಂತ್ರ್ಯದ ಓಟ, ಓದಿರಿ ಅವರ ಕಾದಂಬರಿಗಳು. ಬ್ಯಾಂಕ್ ಉದ್ಯೋಗಿಯಾಗಿ ನಾಲ್ಕು ದಶಕ ಕೆಲಸ ಮಾಡಿ ನಿವೃತ್ತರಾಗಿರುವ ಬೊಳುವಾರರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಕನ್ನಡ ಗದ್ಯ ಸಾಹಿತ್ಯಕ್ಕೆ ಮುಸ್ಲಿಂ ಬದುಕನ್ನು ಮೊತ್ತ ಮೊದಲು ಪರಿಚಯಿಸಿದ ಇವರು, ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಸಂವೇದನೆ ಎಂಬ ...
READ MORE