ಶತಾವಧಾನ ಶಾರದೆ

Author : ಶತಾವಧಾನಿ ಆರ್. ಗಣೇಶ

Pages 72

₹ 60.00




Year of Publication: 2011
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ
Phone: 9448110034

Synopsys

ವಿದ್ವಾಂಸ ಶತಾವಧಾನಿ ಡಾ. ಆರ್. ಗಣೇಶ್ ಅವರ ಕೃತಿ-ಶತಾವಧಾನ ಶಾರದೆ. ಮನಸ್ಸಿನ ಏಕಾಗ್ರತೆಯೇ ಅವಧಾನ. ಈ ಅವಧಾನ ಕಲೆಯು ಪದ್ಯ ರಚನೆಯ ಪ್ರಕ್ರಿಯೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತದೆ. ಜೊತೆಗೆ ಸತತ ಅಧ್ಯಯನ, ಪ್ರತಿಭೆಯೂ ಮುಖ್ಯ.  ಜೊತೆಗೆ ಧೈರ್ಯವು ಸಮಯಸ್ಫೂರ್ತಿಯೂ ಅಗತ್ಯ. ಹೀಗಿದ್ದರೆ ಕಾವ್ಯವು ಉತ್ತಮವಾಗಿ ಮೂಡಿ ಬರುತ್ತದೆ ಎಂಬ ಅಂಶಗಳಿರುವ ಕೃತಿ ಇದು. ಕಾವ್ಯ ಕಟ್ಟುವ ಕ್ರಿಯೆಯಲ್ಲಿ ಓದುಗರಿಗೆ ಆಸಕ್ತಿ ಹೆಚ್ಚಿಸುವ ಕೃತಿಯೂ ಹೌದು. 

About the Author

ಶತಾವಧಾನಿ ಆರ್. ಗಣೇಶ
(04 December 1962)

ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...

READ MORE

Related Books