ಇದೊಂದು ಪ್ರೇಮಕಥೆ. ಬದುಕಿನ ಬಗ್ಗೆ ಕಡೆಂಗೋಡ್ಲು ಶಂಕರಭಟ್ಟರು ಅಧ್ಬುತವಾದ ಮಾತುಗಳನ್ನು ಹೇಳಿದ್ದಾರೆ: ‘ನದಿಯ ನೀರು ಹರಿದಂತೆ ಜೀವನದ ನದಿ ಹರಿಯುತ್ತದೆ. ಹೀಗೆ ಹರಿಯುವಾಗ ಏನೇನೋ ಅನುಭವಗಳನ್ನು ಹೊತ್ತು ತರುತ್ತದೆ. ಆಯ್ಕೆ ಮಾಡುವ ಸ್ವಾತಂತ್ರ್ಯ ಯಾರಿಗೂ ಇಲ್ಲ. ಬದುಕನ್ನು ಇದ್ದಂತೆ ಸ್ವೀಕರಿಸುವುದು ಸಹಜ ಧರ್ಮ.’ ಹೌದು ರಾಜೀವ್, ಸುಮಿತ್ರ ಬದುಕನ್ನು ಬಂದಂತೆ ಸ್ವೀಕರಿಸಿದರು. ಆಯ್ಕೆಯ ಸ್ವಾತಂತ್ರ್ಯ ಅವರಿಗೆ ಇರಲಿಲ್ಲ. ‘ನಿನ್ನೊಳಗೆ ನೀ ಹೊಕ್ಕು ನಿನ್ನನ್ನು ನೀ ಕಂಡು ನೀನೆ ನೀನಾಗು ಗೆಳೆಯ’ ಎಂದರು ಬೇಂದ್ರೆ. ತನ್ನ ಬದುಕಿನ ‘ಶ್ವೇತ ಗುಲಾಬಿ’ಯನ್ನು ಕಳೆದುಕೊಂಡ ರಾಜೀವನನ್ನು ಮತ್ತೆ ಯಾರೂ ನೋಡಲಿಲ್ಲ.ಇದು ಕಾದಂಬರಿಯ ಸಾಲುಗಳು.
ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ. ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ನಂತರದಲ್ಲಿ ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ಬೆಳೆಸಿಕೊಂಡ ...
READ MORE