ಕಾಫಿ ಡೇ ಮಾಲೀಕರಾದ ಸಿದ್ಧಾರ್ಥ್ ಆತ್ಮಹತ್ಯೆಗೆ ಶರಣಾಗಿ ಕೆಲವೇ ದಿನಗಳು ಕಳೆದಿವೆ. ಕಾಫಿ ಸಾಮ್ರಾಜ್ಯದ ಅಧಿಪತಿಯಾಗಿದ್ದ ಸಿದ್ಧಾರ್ಥ್ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ. ಅವರ ಆತ್ಮಹತ್ಯೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರು ಸಿದ್ಧಾರ್ಥ್ ಕುರಿತಾದ ಕೃತಿ ರಚಿಸಿದ್ದಾರೆ. ಕಾಫಿ ಡೇ ಮಾಲೀಕರಾಗಿದ್ದ ಸಿದ್ಧಾರ್ಥ್ ಅವರಿಗೆ ಮತ್ತೊಂದು ಮುಖವಿತ್ತು ಎನ್ನುವುದು ರವಿಯವರ ವಾದ. ಆ ಮುಖವನ್ನು ಈ ಪುಸ್ತಕ ಅನಾವರಣ ಮಾಡಿದ್ದೇನೆ ಎನ್ನುತ್ತಾರೆ ರವಿ ಬೆಳಗೆರೆ.
ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...
READ MOREಸಿದ್ಧಾರ್ಥ್ ಸಾವಿಗೆ ಯಾರು ಕಾರಣ?