ಈ ಕೃತಿಯಲ್ಲಿ ಪ್ರಮುಖವಾಗಿ ಎರಡು ಜಗತ್ತುಗಳಿವೆ. ಒಂದು ಬಾಲ್ಯದ ಕೋಟಜಗತ್ತು. ಅದು ಅವರ ವ್ಯಕ್ತಿತ್ವವನ್ನು ರೂಪಿಸಿದ್ದು, ಎಳೆಯ ಮನಸ್ಸು ತನ್ನ ಸುತ್ತಮುತ್ತಲಿನ ಪರಿಸರಕ್ಕೆ ಸ್ಪಂದಿಸುತ್ತಲೇ ತನ್ನ ಗುರಿ ದಾರಿಗಳನ್ನು ಗುರ್ತಿಸಿಕೊಳ್ಳಲು ಇದು ನೆರವು ನೀಡಿದೆ. ಹುಡುಗ ನಾಗಪ್ಪಯ್ಯನ ಮನಸ್ಸನ್ನು ಆವರಿಸಿದ ಕೆಲವು ವ್ಯಕ್ತಿಗಳ ಪ್ರಸಂಗಗಳು ಇಲ್ಲಿ ಚಿತ್ರಿತವಾಗಿದೆ. ಚಿಕ್ಕಂದಿನಲ್ಲಿ ಎದುರಿಸಿದ ಬಿಕ್ಕಟ್ಟಿನ ಘಟನೆಗಳು ಇಲ್ಲಿ ಹಗುರಹೃದಯದ ಅಭಿವ್ಯಕ್ತಿಯಾಗಿ ರೂಪು ಪಡೆದಿವೆ. ಮತ್ತೊಂದು ಅವರ ವೃತ್ತಿಬದುಕನ್ನು ರೂಪಿಸಿದ ಅಮೆರಿಕ ಜಗತ್ತು. ಕರಾವಳಿಯ ಹುಡುಗನೊಬ್ಬ ಕಡಲು ದಾಟಿ ಅಪರಿಚಿತ ಖಂಡ ಪ್ರವೇಶಿಸಿ ತನ್ನ ಬದುಕನ್ನು ಕಟ್ಟಿಕೊಂಡ ರೋಮಾಂಚಕ ಅನುಭವಗಳಲ್ಲಿ ಕೆಲವು ಇಲ್ಲಿವೆ.
ಅಹಿತಾನಲ ಎಂಬ ಕಾವ್ಯನಾಮದಿಂದ ಬರೆಯುವ ವಿಜ್ಞಾನಿ ನಾಗ ಐತಾಳ ಅವರು ಜನಿಸಿದ್ದು 1932ರ ಅಕ್ಟೋಬರ್ 5ರಂದು. ಮೂಲತಃ ಉಡುಪಿ ಜಿಲ್ಲೆಯ ಕೋಟದವರಾದ ಅವರು ಸದ್ಯ ಕ್ಯಾಲಿಫೋರ್ನಿಯಾದ ಅರ್ಕಾಡಿಯಾದ ನಿವಾಸಿ ಆಗಿರುವ ಐತಾಳರು ಆರಂಭಿಕ ಶಿಕ್ಷಣವನ್ನು ಬೆಂಗಳೂರಿನ ಆರ್ಯ ವಿದ್ಯಾಶಾಲೆಯಲ್ಲಿಯೂ ಪದವಿ ಶಿಕ್ಷಣವನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದರು. ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿಯೂ ಅವರು ಅಧ್ಯಯನ ಮಾಡಿದ್ದಾರೆ. ಭಾರತದಲ್ಲಿ ಪಿಎಚ್.ಡಿ. ಪದವಿ ಪಡೆದ ನಂತರ ಬಯೋಕೆಮಿಸ್ಟ್ರಿಯಲ್ಲಿ ಹೆಚ್ಚಿನ ಅಧ್ಯಯನ ನಡೆಸಲು ಕೆನಡಾಕ್ಕೆ ಹೋದರು. ಅದಾದ ಮೇಲೆ ಅಮೆರಿಕೆಗೆ ಹೋದ ಅವರು 1975ರಿಂದ 2001ರ ವರೆಗೆ ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂಶೋಧನ ಪ್ರಾಧ್ಯಾಪಕರಾಗಿ ...
READ MORE