‘ಸ್ನೇಹಯಾತ್ರೆ’ ಕೃತಿಯು ಅನುಪಮಾ ನಿರಂಜನ ಅವರ ಪ್ರವಾಸ ಕಥನವಾಗಿದೆ. ಲೇಖಕಿ ತಾವು ಕಂಡಂತಹ ವಿಚಾರಗಳನ್ನು ಅನುಭವದ ಮೂಲಕ ಕಟ್ಟಿಕೊಟ್ಟಿದ್ದಾರೆ. ‘ಅಂಗೈಯಲ್ಲಿ ಯೂರೊ ಅಮೆರಿಕ’ ಎಂಬುದು ಲೇಖಕಿಯ ಪ್ರವಾಸ ಕಥನ. ವೈದ್ಯಕೀಯ ಲೇಖನ, ಕಾದಂಬರಿ, ವೈಚಾರಿಕ ಬರಹಗಳು ಇತ್ಯಾದಿ ಪ್ರಕಾರದ ಸಾಹಿತ್ಯ ರಚಿಸಿರುವ ಲೇಖಕಿ ಅನುಪಮಾ ನಿರಂಜನ ಅವರು, ಸ್ನೇಹಯಾತ್ರೆ’ಯನ್ನೂ ಸಹ ತುಂಬಾ ಪರಿಣಾಮಕಾರಿಯಾಗಿ ತಮ್ಮ ಪ್ರವಾಸ ಕಥನವನ್ನು ಚಿತ್ರಿಸಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಮೊದಲ ಹೆಸರು ಡಾ.ವೆಂಕಟಲಕ್ಷ್ಮಿ. ಬರವಣಿಗೆಯನ್ನು ಹವ್ಯಾಸ ಮಾಡಿಕೊಂಡಿದ್ದ ಅವರು ’ಅನುಪಮಾ ನಿರಂಜನ’ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ರಚಿಸಿದ್ದಾರೆ. 1934ರ ಮೇ 17 ರಂದು ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಖ್ಯಾತ ಕಾದಂಬರಿಕಾರ ನಿರಂಜನ ಅವರ ಪತ್ನಿ. ಅನುಪಮ ಅವರು ಪ್ರತಿಭಾವಂತ ಬರಹಗಾರ್ತಿ. ಅವರ ಪ್ರಕಟಿತ ಕೃತಿಗಳು ಅನಂತಗೀತೆ, ಸಂಕೋಲೆಯೊಳಗಿಂದ, ಶ್ವೇತಾಂಬರಿ, ನೂಲು ನೇಯ್ದ ಚಿತ್ರ, ಹಿಮದ ಹೂ, ಸ್ನೇಹ ಪಲ್ಲವಿ, ಹೃದಯವಲ್ಲಭ, ಆಕಾಶಗಂಗೆ, ಸಸ್ಯ ಶ್ಯಾಮಲಾ, ಋಣ, ಮೂಡಲ ಪಡುವಣ, ಮಾಧವಿ, ಎಳೆ, ಸೇವೆ, ಕೊಳಚೆ ಕೊಂಪೆಯ ದಾನಿಗಳು, ಇವು ಅವರ ಕಾದಂಬರಿಗಳು. ಕಥಾಸಂಕಲನಗಳು- ...
READ MORE