ಪ್ರಸಿದ್ಧ ಕತೆ, ಕಾದಂಬರಿಕಾರ್ತಿ ಎ. ಪಿ. ಮಾಲತಿ ಅವರ ಆತ್ಮಕತೆ ‘ಸ್ಮೃತಿಯಾನ’. ಅವರ ಗತಕಾಲದ ಜೀವನ ಪುಟಗಳನ್ನು ತೆರೆದು ನೋಡುತ್ತಾ ಅನುಭವಗಳನ್ನು ನೆನಪಿಸಿಕೊಂಡಿದ್ದು, ಅವರ ಸಾಹಿತ್ಯ ಕೃಷಿಯ ಖುಷಿ, ಬೆರಗು, ಅಳಿಸಲಾಗದೆ ಉಳಿದೇಹೋಗುವ ಅವಸ್ಥೆಗಳು, ಜೊತೆಯಾದ ಒಡನಾಡಿಗಳನ್ನೆಲ್ಲ ಸ್ಮರಿಸಿರುವ ವಿಶಿಷ್ಟ ಕೃತಿ ಇದಾಗಿದೆ.
ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಸ್ಥಾನ ಹೊಂದಿರುವ ಪ್ರಸಿದ್ಧ ಕತೆ, ಕಾದಂಬರಿಕಾರ್ತಿ ಎ. ಪಿ. ಮಾಲತಿಯವರು ಹುಟ್ಟಿದ್ದು ಭಟ್ಕಳದಲ್ಲಿ 1944 ರ ಮೇ 6 ರಂದು. ಅವರ ಎರಡು ಪತ್ತೆದಾರಿ ಕಾದಂಬರಿಗಳು ಹೊರಬಂದಾದ ಕೇವಲ ಹದಿನೈದರ ವಯಸ್ಸು. ಹಿಂದಿ ಭಾಷೆ ಕಲಿತು ಓದಿದ್ದು ಪ್ರೇಮಚಂದರ ಕಥೆ, ಠಾಕೂರರ ಬಂಗಾಲಿ ಅನುವಾದಗಳು. ಅಧ್ಯಾಪಕರು, ಸಾಹಿತ್ಯಾಸಕ್ತರು, ವಿದ್ಯಾವಂತರಾದ ಪತಿ, ಎ.ಪಿ. ಗೋವಿಂದಭಟ್ಟರಿಂದ ದೊರೆತ ಪ್ರೋತ್ಸಾಹ. ಕೃಷಿ ಜೀವನದ ಜೊತೆಗೆ ಹಳ್ಳಿಯ ಹೆಂಗಸರು ಭತ್ತ ಕುಟ್ಟಲು ಪಡುತ್ತಿದ್ದ ಭವಣೆ ನೋಡಿ ಪ್ರಾರಂಭಿಸಿದ ರೈಸ್ಮಿಲ್, ಜೊತೆಗೆ ಹಾಲಿನ ವ್ಯಾಪಾರ. ಜನರೊಡನೆ ಬೆರೆಯುತ್ತಾ ಹೋದಂತೆಲ್ಲ ...
READ MORE