ಸೋಮಾರಿ ಓಲ್ಯಾ ಮಕ್ಕಳ ಸಾಹಿತ್ಯವನ್ನು ಲೇಖಕಿ ವೈದೇಹಿ ಅವರು ರಚಿಸಿದ್ದಾರೆ. ಮಕ್ಕಳ ಕಥೆಗಳನ್ನು ಒಳಗೊಂಡಿರುವ ಈ ಪುಸ್ತಕದಲ್ಲಿ ಕಥೆಗಳನ್ನು ಚಿತ್ರಗಳೊಂದಿಗೆ ಪ್ರಕಟಿಸಲಾಗಿದೆ. ಇಲ್ಲಿರುವ ಕತೆಗಳು ಹಲವಾರು ನೀತಿಗಳನ್ನು ಹೊಂದಿವೆ. ಶಿಕ್ಷಣ ಹಾಗೂ ಸಮಾಜಕ್ಕೆ ಹೆಚ್ಚು ಒತ್ತು ಕೊಟ್ಟು ವೈದೇಹಿಯವರು ಮಕ್ಕಳಿಗೆ ಬೇಗನೆ ಮನಮುಟ್ಟುವ ಕಥೆಗಳನ್ನು ಇಲ್ಲಿ ರಚಿಸಲಾಗಿದೆ. ಮಕ್ಕಳು ಸೋಮಾರಿಯಾಗಿರಬಾರದೆಂಬುದನ್ನು ಕೇಂದ್ರವಾಗಿರಿಸಿಕೊಂಡು ಇಲ್ಲಿ ಬರೆದಿರುವ ಕಥೆಗಳು ಮಕ್ಕಳಿಗೆ ಜಾಗೃತಿ ಹುಟ್ಟಿಸುತ್ತದೆ.
ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...
READ MORE