ಲೇಖಕ ಲಕ್ಷ್ಮೀಶ್ ಹೆಗಡೆ ಸೋಂದಾ ಅವರ ಕೃತಿ ಸೋಂದಾ ಇತಿಹಾಸ. ಪ್ರಸ್ತುತ ಕೃತಿ ನಾಡಿನ ಪ್ರಸಿದ್ಧ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸ್ಥಳವಾಗಿರುವ ಉತ್ತರ ಕನ್ನಡ ಜಿಲ್ಲೆಯ ಸೋಂದಾ ಪ್ರದೇಶದ ಇತಿಹಾಸವನ್ನು ತಿಳಿಸುತ್ತದೆ.ಅಲ್ಲಿ ಆಳ್ವಿಕೆ ಮಾಡಿದ ಸೋದೆ ಅರಸರ ಇತಿಹಾಸದ ಬಗೆಗೂ ಈ ಕೃತಿ ಅಮೂಲ್ಯ ಮಾಹಿತಿಗಳನ್ನು ಒದಗಿಸುತ್ತದೆ. ಸೋಂದಾ ಕ್ಷೇತ್ರ ಸ್ವಾದಿ ಅರಸರ ಆಡಳಿತದಲ್ಲಿ ಸರ್ವಧರ್ಮ ಸಮಭಾವದ ಪುಣ್ಯಕ್ಷೇತ್ರವಾಗಿ ಅಭಿವೃದ್ಧಿ ಹೊಂದಿರುವುದನ್ನು ಲೇಖಕರು ಈ ಪುಸ್ತಕದಲ್ಲಿ ವಿದಿತಪಡಿಸಿದ್ದಾರೆ. ಸೋಂದಾ ಇತಿಹಾಸವು ನಾಡಿನ ಐತಿಹಾಸಿಕ ತಾಣದ ಸಾಂಸ್ಕೃತಿಕ ದರ್ಶನ ಮಾಡಲು ಪ್ರೇರಣೆ ನೀಡುತ್ತದೆ.
ಲಕ್ಷ್ಮೀಶ್ ಹೆಗಡೆ ಸೋಂದಾ, ಇತಿಹಾಸಕಾರರಾಗಿ, ವಾಗ್ಮಿಗಳಾಗಿ ನಾಡಿನ ಚಿರಪರಿಚಿತ ಹೆಸರು. ಕಳೆದ 15 ವರ್ಷಗಳಿಂದ ಇತಿಹಾಸ ಸಂಶೋಧನೆಯಲ್ಲಿ ಸಕ್ರಿಯರಾಗಿ ಹಲವಾರು ಶಾಸನಗಳು, ವೀರಗಲ್ಲುಗಳು, ಐತಿಹಾಸಿಕ ಕುರುಹುಗಳನ್ನು ಸಂಶೋಧಿಸಿ ಅವುಗಳನ್ನು ಅಭ್ಯಸಿಸಿ ಸಮಾಜಕ್ಕೆ ಪರಿಚಯಿಸಿರುತ್ತಾರೆ. ಇದುವರೆಗೂ 13 ಕೃತಿಗಳು, 400 ಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಸಂಶೋಧನೆಗಾಗಿ 2013 ರಲ್ಲಿ ಬಸವರಾಜ ಕಟ್ಟಿಮನಿ ರಾಜ್ಯ ಪ್ರಶಸ್ತಿ ಮತ್ತು 2016 ರಲ್ಲಿ ಕದಂಬ ಸೇವಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿ ವರ್ಷ ಇವರ ಸಂಚಾಲಕತ್ವದಲ್ಲಿ ನಡೆಯುವ ಸೋಂದಾ ಇತಿಹಾಸೋತ್ಸವ ನಾಡಿನಲ್ಲಿ ಪ್ರಸಿದ್ಧಿ ಪಡೆದಿದೆ. ಯುವ ಜನತೆಯಲ್ಲಿ ಸ್ಥಳೀಯ ಇತಿಹಾಸದ ಕುರಿತು ...
READ MORE