ವೈ. ಜಿ. ಭಗವತಿ ಅವರ ಎರಡನೆಯ ಕಥಾ ಸಂಕಲನ ಇದಾಗಿದ್ದು ಆನಂದ ಪಾಟೀಲ ಅವರು ಮುನ್ನಡಿ ಬರೆದಿದ್ದಾರೆ. ಈ ಪುಸ್ತಕದಲ್ಲಿ ಹನ್ನೊಂದು ಮಕ್ಕಳ ಕಥೆಗಳಿದ್ದು ಮಕ್ಕಳ ಮನೋ ಲೋಕದ ವಿಶಿಷ್ಠತೆಗಳ ಜೊತೆಗೆ ನೀತಿಯುಕ್ತ ಮೌಲ್ಯಯುತ ಕಥೆಗಳಿವೆ. ವಿಭಿನ್ನ ಕಥಾವಸ್ತುಗಳನ್ನು ಒಳಗೊಂಡ ಈ ಕತೆಗಳು ಮಕ್ಕಳ ಗಮನ ಸೆಳೆಯುತ್ತವೆ. ಇಲ್ಲಿಯ ಎಲ್ಲ ಕಥೆಗಳು ನಾಡಿನ ವಿವಿಧ ಮಕ್ಕಳ ಮಾಸಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಲೇಖಕ, ಮಕ್ಕಳ ಸಾಹಿತಿ ವೈ. ಜಿ. ಭಗವತಿ ಅವರು ಪ್ರಸ್ತುತ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಿಹಳ್ಳಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹರೆಯದಿಂದಲೋ ಸಣ್ಣ ಕಥೆ, ಮಕ್ಕಳ ಕಥೆ, ಕವನ, ಕಾದಂಬರಿ, ಲೇಖನ ರಚನೆಯಲ್ಲಿ ಆಸಕ್ತಿ ತಳೆದಿದ್ದಾರೆ. ‘ದೇಮಮ್ಮನ ಲೋಟ’(2016), `ಸುಂದ್ರಮ್ಮಜ್ಜಿಯ ಮೊಮ್ಮಗನಂತೆ’ (2019) ಅವರ ಪ್ರಕಟಿತ ಮಕ್ಕಳ ಕಥಾಸಂಕಲನ. ಅವರ ‘ಬದುಕಿನ ಸುತ್ತಮುತ್ತ’ (2018) ಲೇಖನಸಾಹಿತ್ಯ ಪ್ರಕಟವಾಗಿವೆ. ಅವರ ಮತ್ತೊಂದು ‘ಮತ್ತೆ ಹೊಸ ಗೆಳೆಯರು’ ಎಂಬ ಮಕ್ಕಳ ಕಾದಂಬರಿ ನೈರುತ್ಯ ಕನ್ನಡ ಮಾಸಪತ್ರಿಕೆಯಲ್ಲಿ ಧಾರವಾಹಿಯಾಗಿ ಕಳೆದ ಒಂದೂವರೆ ವರ್ಷದಿಂದ ...
READ MORE