ವಿಜಯವಾಣಿ ಪತ್ರಿಕೆಯಲ್ಲಿ ‘ಹೋರಾಟದ ಹಾದಿ’ ಶೀರ್ಷಿಕೆಯಡಿ ಪ್ರಕಟವಾದ ಬಾಬು ಕೃಷ್ಣಮೂರ್ತಿ ಅವರ ಅಂಕಣ ಬರಹಗಳ ಸಂಗ್ರಹ ರೂಪವೇ ‘ಸ್ವಾತಂತ್ಯ್ರ ಹೋರಾಟದ ಹೀರೋಗಳು-4’.
ಬದುಕನ್ನು ಹೋರಾಟದ ಹಾದಿಯಲ್ಲಿ ಸವೆಸಿದವರ, ಸಾರ್ವಜನಿಕರ ಹಿತಾಸಕ್ತಿಗೆ ವ್ಯಯಿಸಿದವರ, ಜನರಿಗಾಗಿ ಪ್ರಾಣದ ಹಂಗು ತೊರೆದು ಹೋರಾಡಿದ ವೀರ ಯೋಧರ ಕತೆಗಳನ್ನು ಹೇಳುತ್ತದೆ. ಅವರ ಬದುಕು-ಸಿದ್ದಾಂತ-ತುಳಿದ ಹಾದಿಯ ಬಗೆಯನ್ನು ಓದುಗರ ಅಂತಃಕರಣಕ್ಕೆ ಮುಟ್ಟಿಸುವಲ್ಲಿ ಸಫಲವಾಗಿದೆ.
ಸಾಹಿತ್ಯ, ಪತ್ರಿಕೋದ್ಯಮ ಎರಡು ಕ್ಷೇತ್ರಗಳಲ್ಲೂ ಚಿರಪರಿಚಿತರಾದ ಬಾಬು ಕೃಷ್ಣಮೂರ್ತಿ ಹುಟ್ಟಿದ್ದು ಬೆಂಗಳೂರು. ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಅತೀವ ಆಸಕ್ತಿ. ಅವರ ಸಂಪಾದಕತ್ವದಲ್ಲಿ ಬಾಲಮಂಗಳ (ಪಾಕ್ಷಿಕ), ಬಾಲಮಂಗಳ ಚಿತ್ರಕಥಾ (ಮಕ್ಕಳ ವ್ಯಂಗ್ಯ ಚಿತ್ರ ಪಾಕ್ಷಿಕ), ಗಿಳಿವಿಂಡು (ಶಿಶು ಪಾಕ್ಷಿಕ ಪತ್ರಿಕೆ) ಪ್ರಕಟವಾಗಿವೆ. ಇವರು ರಚಿಸಿದ ಸ್ವಾತಂತ್ರ್ಯವೀರ ಚಂದ್ರಶೇಖರ ಆಜಾದ್ ಕುರಿತು ಆರು ವರ್ಷ ಕಾಲ ಸಂಶೋಧನೆ, ಸ್ಥಳವೀಕ್ಷಣೆ ನಡೆಸಿ ರಚಿಸಿದ ಕೃತಿ ‘ಅಜೇಯ’. ಅವರ ಪ್ರಮುಖ ಕೃತಿಗಳು - ಅಜೇಯ (1974), ಸಿಡಿಮದ್ದು ನೆತ್ತರು ನೇಣುಗಂಬ (1984), ಅದಮ್ಯ (1984), ರುಧಿರಾಭಿಷೇಕ (2005), ಡಾ. ಸಿ.ಜಿ. ಶಾಸ್ತಿಒಂದು ಯಶೋಗಾಥೆ (2007), 1857-ಭಾರತದ ಸ್ವಾತಂತ್ರ್ಯ ಸಂಗ್ರಾಮ (2007), ...
READ MORE