ಸ್ವಾತಂತ್ರ್ಯ ಹೋರಾಟಗಾರ ವಿದ್ಯಾಧರ ಗುರೂಜಿ

Author : ಎ.ಕೆ.ರಾಮೇಶ್ವರ

Pages 312

₹ 250.00




Year of Publication: 2013
Published by: ವಿದ್ಯಾಧರ ಗುರೂಜಿ ಅವರ ಜನ್ಮಶತಮಾನೋತ್ಸವ ಆಚರಣಾ ಸಮಿತಿ
Address: ಕಲಬುರಗಿ

Synopsys

ಸ್ವಾತಂತ್ರ್ಯ ಹೋರಾಟಗಾರ ವಿದ್ಯಾಧರ ಗುರೂಜಿ ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಗೌರವಾರ್ಥವಾಗಿ ಪ್ರಕಟಿಸಿದ ಕೃತಿ ಇದು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಗಲ್ಲುಶಿಕ್ಷೆಗೆ ಗುರಿಯಾದ ಭಗತ್ ಸಿಂಗ್, ಸುಖದೇವ, ರಾಜಗುರು ಅವರ ಕರ್ಣಕಠೋರವಾದ ಮರಣವಾರ್ತೆ ಕೇಳಿ ಮನಕಲಕಿ ಹೋರಾಟದ ಹಾದಿ ಹಿಡಿದ ವಿದ್ಯಾಧರ ಗುರೂಜಿ ಅವರ ಹೋರಾಟದ ಬದುಕಿನ ಕುರಿತು ಈ ಕೃತಿ ವಿವರಿಸುತ್ತದೆ.

About the Author

ಎ.ಕೆ.ರಾಮೇಶ್ವರ
(02 May 1934)

ಎ.ಕೆ.ರಾಮೇಶ್ವರ ಮಕ್ಕಳ ಸಾಹಿತಿಗಳಲ್ಲಿ ಪ್ರಮುಖರು. ಮಕ್ಕಳಿಗಾಗಿಯೇ ಹಲವಾರು ಕೃತಿಗಳನ್ನು ರಚಿಸಿದ ಕೀರ್ತಿ ಇವರದು. 1934 ಮೇ 2ರಂದು ವಿಜಯಪುರ  ಜಿಲ್ಲೆಯ ದದಾಮಟ್ಟಿ ತಾಲ್ಲೂಕಿನಲ್ಲಿ ಹುಟ್ಟಿದ ಎ.ಕೆ.ರಾಮೇಶ್ವರ ಅವರು ಗುಲಬರ್ಗಾ ಜಿಲ್ಲೆಯನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು ಬಂದಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಮೇಶ್ವರ ಅವರು ಮಕ್ಕಳ ಸಾಹಿತಿ ಎಂದೇ ಪ್ರಸಿದ್ಧರಾದವರು.  ಮಕ್ಕಳಿಗಾಗಿ ಸುಮಾರು ಹತ್ತು ಗ್ರಂಥಗಳನ್ನು ರಚಿಸಿರುವ ಇವರು ಜಾನಪದ ಕ್ಷೇತ್ರದಲ್ಲೂ ಗಮನಾರ್ಹ ಕೆಲಸ ಮಾಡಿದ್ದಾರೆ. ಸರಳ ಜೀವನ ನಡೆಸುವ ಎ.ಕೆ.ರಾಮೇಶ್ವರ ಅವರು ಹಳ್ಳಿಗಳತ್ತ ಆಕರ್ಷಿತರಾಗಿ ಜನಪದರ ಕಲೆ,ಸಾಹಿತ್ಯ, ಸಂಪ್ರದಾಯಗಳನ್ನೆಲ್ಲ ತೆರೆದ ಕಣ್ಣಿನಿಂದ ಕಂಡವರು.  ...

READ MORE

Related Books