‘ತಪ್ಪು ತಿದ್ದುವ ತಪ್ಪು’ ಕೃತಿಯೂ ಗಂಗಾಧರ ಬೆಳ್ಳಾರೆ ಅವರ ಕೌನ್ಸಿಲಿಂಗ್ ಆಧಾರಿತ ಚಿಂತನಾ ಬರಹಗಳ ಕೃತಿ. ವೃತ್ತಿಯಿಂದ ಆಪ್ತ ಸಮಾಲೋಚಕರು. ಮನೋವಿಜ್ಞಾನಿಯಾಗಿಯೂ ಸಾಮಾಜಿಕ -ಶೈಕ್ಷಣಿಕ ಸಮಸ್ಯೆಗಳ ವಿಶ್ಲೇಷಕರು. ಬದುಕಿನಲ್ಲಿ ಹತಾಶಗೊಂಡವರ ಪ್ರೀತಿಯನ್ನು ಹೆಚ್ಚಿಸುವ ಪ್ರೇರಣಾತ್ಮಕ ಬರಹಗಳು ಇಲ್ಲಿವೆ.
ಆಪ್ತಸಲಹೆಗಾರ, ಮನೋವಿಜ್ಞಾನಿ ಹಾಗೂ ಸಾಹಿತಿಯಾಗಿರುವ ಗಂಗಾಧರ ಬೆಳ್ಳಾರೆ ಹುಟ್ಟಿದ್ದು 1965ರಲ್ಲಿ. ಮನೋವಿಜ್ಞಾನ ವ್ಯಾಸಂಗದೊಂದಿಗೆ ಪದವಿ ಹಾಗೂ ಕೌನ್ಸೆಲಿಂಗ್ ಮತ್ತು ಸೈಕೋಥೆರಪಿಯಲ್ಲಿ ಸ್ನಾತಕೋತ್ತರ ಪದವೀಧರರು. ಯಕ್ಷಗಾನ ಕಲಾವಿದ, ಮೃದಂಗವಾದಕ, ಮೇಕಪ್ ಕಲಾವಿದ, ನೃತ್ಯರೂಪಕ ಹಾಗೂ ನಾಟಕಗಳ ಕಲಾವಿದರಾಗಿಯೂ ಪ್ರಸಿದ್ಧರು. ಸೈಕೋಥೆರಪಿ, ಗ್ರೂಪ್ ಕೌನ್ಸೆಲಿಂಗ್, ಕ್ಲಿನಿಕಲ್ ಹಿಪ್ನೋಸಿಸ್ ಚಿಕಿತ್ಸಕರು. ‘ಚಿಲಿಪಿಲಿ, ಗಾಜಿನ ತೇರು, ತಬ್ಬಲಿಯು ನೀನಲ್ಲ ಮಗಳೆ, ಕಲಿಕೆ ಹಾದಿಯ ಮಗು, ಕನಸು ಹೆಕ್ಕುವ ಮನಸು, ಇವರು ನೀವಲ್ಲ, ತಪ್ಪು ತಿದ್ದುವ ತಪ್ಪು, ಮೌನಗರ್ಭ’ ಅವರ ಕೃತಿಗಳು. ‘ನೆನಪಿಗೊಂದು ಕೌನ್ಸೆಲಿಂಗ್’ ಕೃತಿಗೆ ‘ಅಕಲಂಕ ಪುಸ್ತಕ ಪುರಸ್ಕಾರ ಪ್ರಶಸ್ತಿ’ ದೊರೆತಿದೆ. ...
READ MORE