ಖ್ಯಾತ ವಿದ್ವಾಂಸರಾದ ಮಲ್ಲೇಪುರಂ ಜಿ ವೆಂಕಟೇಶ ಅವರ ಕೃತಿ. ಭಾರತೀಯ ಸಂಸ್ಕೃತಿಯ ಮೂಲಗಾಮಿ ಚಿಂತನೆಗಳು ಈ ತತ್ವಕಥನದಲ್ಲಿ ಇವೆ. ನಮ್ಮ ನಡುವಿನ ಅಪರೂಪದ ವಿದ್ವಾಂಸರಾದ ಮಲ್ಲೇಪುರಂ ಇಲ್ಲೊಂದು ವಿಸ್ತೃತ ಚರ್ಚೆಯನ್ನು ತೆರೆದಿದ್ದಾರೆ. ಇದು ತತ್ವಶಾಸ್ತ್ರದ ಕಥನ. ಸ್ವೋಪಜ್ಞ ಶೈಲಿಯ್ಯಲಿರುವ ಈ ಕೃತಿಯಲ್ಲಿ ಪುರಾಣ, ಇತಿಹಾಸ, ರಾಮಾಯಣ, ಮಹಾಭಾರತ, ತತ್ವಶಾಸ್ತ್ರಗಳ ಅನುಸಂಧಾನವಿದೆ ಎಂದು ಈಗಾಗಲೇ ವಿದ್ವಾಂಸರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ, ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ್ಯಾಂಕಿನೊಡನೆ ಕುವೆಂಪು ಚಿನ್ನದ ...
READ MORE