‘ಅಂಕಲ್ ಟಾಮ್ ನ ಕತೆ’ ವರ್ಣಭೇದ ನೀತಿ ವಿರುದ್ಧದ ಹೋರಾಟದಲ್ಲಿ ಜನಾಭಿಪ್ರಾಯವನ್ನು ಮೂಡಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಹ್ಯಾರಿಯಟ್ ಬೀಚರ್ ಸ್ಟೋವ್ ಅವರ ಅಂಕಲ್ ಟಾಮ್ಸ್ ಕ್ಯಾಬಿನ್ ನ ಸಂಕ್ಷಿಪ್ತ ಭಾವಾನುವಾದ. ಅಬ್ರಹಾಂ ಲಿಂಕನ್ ಅವರಿಂದ ಆರಂಭಿಸಿ ಅನೇಕ ಅಗ್ರಶ್ರೇಣಿ ನಾಯಕರಿಗೆ ಸ್ಪೂರ್ತಿ ತುಂಬಿದ ಅಂಕಲ್ ಟಾಮ್ಸ್ ಕ್ಯಾಬಿನ್ ಮೊದಲ ಮುದ್ರಣದಲ್ಲೇ ಮೂರು ಲಕ್ಷ ಪ್ರತಿಗಳ ಮಾರಾಟದ ದಾಖಲೆ ಸ್ಥಾಪಿಸಿದ್ದಲ್ಲದೆ, ಈವೆರೆಗೂ ಅನೇಕ ಮುದ್ರಣಗಳನ್ನು ಕಂಡು ಸುಮಾರು ಹದಿನೈದು ಮಿಲಿಯನ್ ಪ್ರತಿಗಳು ಮಾರಾಟವಾಗಿರುವ ಅಪ್ರತಿಮ ಜನಪ್ರಿಯತೆ ಗಳಿಸಿದೆ. ಜಗತ್ತಿನ 40 ಭಾಷೆಗೆ ಅನುವಾದವಾಗಿರುವ ಇದರ ನಾಟಕ ರೂಪಾಂತರ ಐವತ್ತು ವರ್ಷಗಳ ಪ್ರದರ್ಶನದ ದಾಖಲೆ ಹೊಂದಿದೆ. ಈ ಜನಪ್ರಿಯ ಕೃತಿಯನ್ನು ಲೇಖಕ ಎನ್.ಎಸ್. ಶ್ರೀಧರಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.
ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು 'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...
READ MORE