‘ಉರಿಯ ನಾಲಗೆ’ ಹಿರಿಯ ಲೇಖಕ ಕೀರ್ತಿನಾಥ ಕುರ್ತಕೋಟಿ ಅವರ ಅಂಕಣ ಬರಹಗಳ ಸಂಕಲನ. ಮನೋರಮಾ ಗ್ರಂಥಮಾಲೆ ಈ ಕೃತಿಯನ್ನು ಪ್ರಕಟಿಸಿದ್ದು, ಈ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಪ್ರಜಾವಾಣಿಗಾಗಿ ಅವರು ಬರೆಯುತ್ತಿದ್ದ ಜನಪ್ರಿಯ ಅಂಕಣ ಉರಿಯ ನಾಲಗೆಯನ್ನೇ ಕೃತಿಯ ಹೆಸರಾಗಿಯೂ ಪ್ರಕಟಿಸಿದ ಈ ಪುಸ್ತಕ ಕೀರ್ತಿನಾಥ ಕುರ್ತಕೋಟಿಯವರ ಬರಹಗಳ ಹದಕ್ಕೆ ಹಿಡಿದ ಕನ್ನಡಿಯಾಗಿದೆ.
ಕವಿ, ನಾಟಕಕಾರ, ವಿಮರ್ಶಕ, ಅನುವಾದಕ, ಅಂಕಣಕಾರ ಕೀರ್ತಿನಾಥ ಕುರ್ತಕೋಟಿ ಅವರು 12-10-1928ರಂದು ಗದಗಿನಲ್ಲಿ ಜನಿಸಿದರು. ತಂದೆ ಡಿ.ಕೆ.ಕುರ್ತಕೋಟಿ, ತಾಯಿ-ಪದ್ಮಾವತಿಬಾಯಿ. ಕೆಲಕಾಲ ಗದಗಿನ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಕುರ್ತಕೋಟಿಯವರು, ಸ್ನಾತಕೋತ್ತರ ಪದವಿಯನ್ನು ಪಡೆದು, ಗುಜರಾತಿಗೆ ತೆರಳಿ ಅಲ್ಲಿ ಕಾಲೇಜು ಉಪನ್ಯಾಸಕರಾಗಿ ವೃತ್ತಿಯನ್ನು ಕೈಗೊಂಡರು. ಅಲ್ಲಿ ನಿವೃತ್ತಿಯನ್ನು ಪಡೆದ ನಂತರವೇ ಧಾರವಾಡಕ್ಕೆ ಮರಳಿದರು. ಜಿ.ಬಿ.ಜೋಶಿಯವರ ಮನೋಹರ ಗ್ರಂಥಮಾಲೆಗೆ ಮೊದಲಿನಿಂದಲೂ ಸಾಹಿತ್ಯ ಸಲಹಾಕಾರರಾಗಿದ್ದರು. ಜೊತೆಗೆ ಪ್ರಜಾವಾಣಿಯಲ್ಲಿ ವಾರವಾರವೂ ಪ್ರಕಟವಾಗುತ್ತಿದ್ದ "ಉರಿಯ ನಾಲಗೆ" ಎಂಬ ಅಂಕಣ ಬಹಳ ಜನಪ್ರಿಯವಾಗಿತ್ತು. 1959ರಲ್ಲಿ ಮನೋಹರ ಗ್ರಂಥಮಾಲೆ ಹೊರತಂದ ತನ್ನ ರಜತ ವರ್ಷದ ಹೊತ್ತಿಗೆ “ನಡೆದು ...
READ MORE