ವಿಜಯನಗರದ ಚರಿತ್ರೆಯನ್ನು ಕೇವಲ ರಾಜರ ಆಡಳಿತದಿಂದಷ್ಟೇ ನೋಡದೇ ಆ ಕಾಲಘಟ್ಟದ ಜನ ಸಾಮಾನ್ಯರ ಜೀವನದ ವಾಸ್ತವವನ್ನು ಚಿತ್ರಿಸುವ ನಿಟ್ಟಿನಲ್ಲಿ ಬರೆದ ಕೃತಿ ಇದು. ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರು ಅಂದಿನ ಜನಾಂಗದ ಜೀವನ, ಸಂಸ್ಕೃತಿ, ಅವರ ಆಚಾರ - ವಿಚಾರಗಳನ್ನು ಹಾಗೂ ಅವರ ಬೇಟೆ, ಪಶುಪಾಲನೆ ಮತ್ತು ಕೃಷಿಯ ಹಿನ್ನೆಲೆಯಲ್ಲಿ ಮಾಡಿರುವ ಅಧ್ಯಯನ ಈ ಪುಸ್ತಕದಲ್ಲಿದೆ.
.ಲೇಖಕ ವಿರೂಪಾಕ್ಷಿ ಪೂಜಾರಹಳ್ಳಿ ಅವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕರು. ಎಂ.ಎ, ಎಂ.ಫಲ್, ಪಿಎಚ್ ಡಿ ಪದವೀಧರರು. ಕರ್ನಾಟಕ ಮಧ್ಯಕಾಲೀನ ಸಾಂಸ್ಕೃತಿಕ ಚರಿತ್ರೆ ವಿಷಯದಲ್ಲಿ ಪರಿಣಿತಿ ಹೊಂದಿದ್ದಾರೆ. ಕೃತಿಗಳು: ಬಳ್ಳಾರಿ ಜಿಲ್ಲೆಯ ಪಾಳೆಗಾರರು, ವಿಜಯನಗರ ಕಾಲದ ಸಂಸ್ಕೃತಿ, ಮಹರ್ಷಿ ವಾಲ್ಮೀಕಿಯ ಲೋಕದೃಷ್ಟಿ ಮತ್ತು ವಿಚಾರಧಾರೆ, ಬ್ರಿಟಿಷರ ವಿರುದ್ಧ ಬೇಡ ನಾಯಕರ ಹೋರಾಟಗಳು, ಕೃಷ್ಣ ದೇವರಾಯನ ತೀರ್ಥಯಾತ್ರೆಗಳು ಹಾಗೂ ಚಿನ್ನಹಗರಿ ಪರಿಸರದ ಪ್ರಾಚ್ಯಾವಶೇಷಗಳು, ಪೆರಿಯಾರ್ ಮತ್ತು ದ್ರಾವಿಡ ಚಳವಳಿ ಸೇರಿದಂತೆ 200ಕ್ಕೂ ಅಧಿಕ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಪ್ರಶಸ್ತಿ: ಹರತಿ ವೀರನಾಯಕ ಪ್ರಶಸ್ತಿ (2012), ವಾಲ್ಮೀಕಿ ಪ್ರಶಸ್ತಿ ...
READ MORE